2:04 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Mangaluru | ಸಂತ ವಿನ್ಸೆಂಟ್ ಪಾವ್ಲ್ ಪ್ರಾದೇಶಿಕ ಸಿಟಿ ವಲಯದ ಸಾಮಾನ್ಯ ಸಭೆ: ಆಧ್ಯಾತ್ಮಿಕ ಸಮಾಲೋಚನೆ

15/09/2025, 19:16

ಮಂಗಳೂರು(reporter Karnataka.com): ಸಮಾಜ ಸೇವಾ ಸಂಘಟನೆ ಸಂತ ವಿನ್ಸೆಂಟ್ ಪಾವ್ಲ್ ಸಭಾ ಇದರ ಮಂಗಳೂರು ಪ್ರಾದೇಶಿಕ ಸಿಟಿ ವಲಯದ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಆಧ್ಯಾತ್ಮಿಕ ಸಮಾಲೋಚನೆಯು ನಗರದ ದೇರೆಬೈಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಸುಖ ಜೀವನವನ್ನು ದಾನ ಹಾಗೂ ಧರ್ಮದ ಮೂಲಕ ನಡೆಸ ಬಹುದು ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಈ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಜೋಸೆಫ್ ಮಾರ್ಟಿಸ್ ಅವರು ಮಾತನಾಡಿ ಸಂತ ವಿನ್ಸೆಂಟ್ ಪಾವ್ಲ್ ಸಭೆಯ ಸದಸ್ಯರು ಯಾವುದೇ ಪ್ರಚಾರವಿಲ್ಲದೆ ಗೌಪ್ಯವಾಗಿ ದಾನ, ಧರ್ಮ, ಬಡವರ ಸೇವೆಯನ್ನು ಮಾಡುತ್ತಿದ್ದು, ಈ ಸೇವೆ ದೇವರ ಸೇವೆಗೆ ಸಮಾನ. ಬಡತನವು ಖಂಡಿತಾ ಶಾಪವಲ್ಲ. ಯಾವುದೇ ಪರಿಸ್ಥಿತಿಯಲ್ಲಿಯೂ ನಾವು ಧೃತಿಗೆಡದೆ ಪ್ರಯತ್ನವನ್ನು ಮುಂದುವರಿಸಿದರೆ ಯಶಸ್ಸು ಸಾಧಿಸ ಬಹುದು ಎಂದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಿಟಿ ವಲಯದ ಅಧ್ಯಕ್ಷ ರಿಚಾರ್ಡ್ ಪಿಂಟೊ, ಕಾರ್ಯದರ್ಶಿ ಐರಿನ್ ಪಿಂಟೊ, ಖಜಾಂಚಿ ಯೂಜಿನ್ ಲೋಬೊ, ದೇರೆಬೈಲ್ ಘಟಕದ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಪ್ರಾದೇಶಿಕ ಸಿಟಿ ವಲಯದ ಉಪಾಧ್ಯಕ್ಷ ಜೋಕಿಂ ಮತ್ತು ಇತರರು ಉಪಸ್ಥಿತರಿದ್ದರು.
ಆಶಾ ಡಿ ಸಿಲ್ವಾ ನೇತೃತ್ವದ ತಂಡದಿಂದ ಪ್ರಾರ್ಥನೆ ನಡೆಯಿತು. ಕಾರ್ಯದರ್ಶಿ ಐರಿನ್ ಪಿಂಟೊ ವರದಿ ವಾಚಿಸಿದರು.
ಪ್ರಾದೇಶಿಕ ಸಿಟಿ ವಲಯವು ದೇರೆಬೈಲ್, ಕುಲಶೇಖರ, ಬೋಂದೆಲ್, ಪಾಲ್ದನೆ, ವಾಮಂಜೂರು, ಕೆಲರಾಯ್, ಬಜಾಲ್, ನೀರುಮಾರ್ಗ, ಆಂಜೆಲೋರ್, ಬಜ್ಜೋಡಿ, ಶಕ್ತಿನಗರ, ಪೆರ್ಮಾಯಿ ಚರ್ಚ್ ಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು