8:22 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಜಾನುವಾರುಗಳ ದಾರುಣ ಸಾವು; ಮೃತದೇಹ ವಿಲೇವಾರಿ ಮಾಡದ ರೈಲ್ವೆ ಇಲಾಖೆ; ಸಾರ್ವಜನಿಕ ಪ್ರತಿಭಟನೆ

15/05/2023, 22:36

ಮಂಗಳೂರು(reporterkarnataka.com):: ಬೈಕಂಪಾಡಿಯ ಅಂಗರಗುಂಡಿಯಲ್ಲಿ ಇಂದು ಮುಂಜಾನೆ ನಡೆದ ಘೋರ ದುರಂತದಲ್ಲಿ ಗೂಡ್ಸ್ ರೈಲಿನಡಿಗೆ ಸಿಲುಕಿ 27 ಜಾನುವಾರುಗಳು ಸಾವನ್ನಪ್ಪಿದ್ದು, ಮೃತ ಜಾನುವಾರುಗಳ ಮೃತದೇಹವನ್ನು ವಿಲೇವಾರಿ ಮಾಡದೆ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ.
ಎಮ್ಮೆ, ದನ ಸೇರಿದಂತೆ ಸಾಲು ಸಾಲು ಜಾನುವಾರುಗಳು ಹಳಿ ಮೇಲೆ ರೈಲಿಗೆ ಅಡ್ಡ ಬಂದ ಪರಿಣಾಮ ಈ ಘೋರ ದುರಂತ ನಡೆದಿದೆ.


ಲೋಕೊ ಪೈಲೆಟ್ ರೈಲಿನ ವೇಗ ನಿಯಂತ್ರಣ ಮಾಡಿ ರೈಲು ಹಳಿ ತಪ್ಪುವ ಅಪಾಯವನ್ನು ತಪ್ಪಿಸಿದ್ದಾರೆ. ಮಹಾ ನಗರಪಾಲಿಕೆ ಬೀಡಾಡಿ ಜಾನುವಾರುಗಳನ್ನು ನಿಯಂತ್ರಿಸದಿದ್ದರೆ ಇನ್ನಷ್ಟು ದುರಂತ ಸಂಭವಿಸಬಹುದು ಎಂದು ಸ್ಥಳೀಯರು ಹೇಳುತ್ತಾರೆ. ವಿಲೇವಾರಿಯಾಗದ ಜಾನುವಾರುಗಳ ಮೃತದೇಹ ಪರಿಸರದಲ್ಲಿ ದುರ್ನಾತ ಬೀರುತ್ತಿದೆ.
ನಗರಪಾಲಿಕೆ, ರೈಲ್ವೆ ಇಲಾಖೆ ನಿರ್ಲಕ್ಷ ವಿರೋಧಿಸಿ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಇನ್ಸ್ಪೆಕ್ಟರ್, ಸ್ಥಳೀಯ ಅಧಿಕಾರಿಗೆ ಘೆರಾವ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು