12:17 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಜಾನುವಾರುಗಳ ದಾರುಣ ಸಾವು; ಮೃತದೇಹ ವಿಲೇವಾರಿ ಮಾಡದ ರೈಲ್ವೆ ಇಲಾಖೆ; ಸಾರ್ವಜನಿಕ ಪ್ರತಿಭಟನೆ

15/05/2023, 22:36

ಮಂಗಳೂರು(reporterkarnataka.com):: ಬೈಕಂಪಾಡಿಯ ಅಂಗರಗುಂಡಿಯಲ್ಲಿ ಇಂದು ಮುಂಜಾನೆ ನಡೆದ ಘೋರ ದುರಂತದಲ್ಲಿ ಗೂಡ್ಸ್ ರೈಲಿನಡಿಗೆ ಸಿಲುಕಿ 27 ಜಾನುವಾರುಗಳು ಸಾವನ್ನಪ್ಪಿದ್ದು, ಮೃತ ಜಾನುವಾರುಗಳ ಮೃತದೇಹವನ್ನು ವಿಲೇವಾರಿ ಮಾಡದೆ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ.
ಎಮ್ಮೆ, ದನ ಸೇರಿದಂತೆ ಸಾಲು ಸಾಲು ಜಾನುವಾರುಗಳು ಹಳಿ ಮೇಲೆ ರೈಲಿಗೆ ಅಡ್ಡ ಬಂದ ಪರಿಣಾಮ ಈ ಘೋರ ದುರಂತ ನಡೆದಿದೆ.


ಲೋಕೊ ಪೈಲೆಟ್ ರೈಲಿನ ವೇಗ ನಿಯಂತ್ರಣ ಮಾಡಿ ರೈಲು ಹಳಿ ತಪ್ಪುವ ಅಪಾಯವನ್ನು ತಪ್ಪಿಸಿದ್ದಾರೆ. ಮಹಾ ನಗರಪಾಲಿಕೆ ಬೀಡಾಡಿ ಜಾನುವಾರುಗಳನ್ನು ನಿಯಂತ್ರಿಸದಿದ್ದರೆ ಇನ್ನಷ್ಟು ದುರಂತ ಸಂಭವಿಸಬಹುದು ಎಂದು ಸ್ಥಳೀಯರು ಹೇಳುತ್ತಾರೆ. ವಿಲೇವಾರಿಯಾಗದ ಜಾನುವಾರುಗಳ ಮೃತದೇಹ ಪರಿಸರದಲ್ಲಿ ದುರ್ನಾತ ಬೀರುತ್ತಿದೆ.
ನಗರಪಾಲಿಕೆ, ರೈಲ್ವೆ ಇಲಾಖೆ ನಿರ್ಲಕ್ಷ ವಿರೋಧಿಸಿ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಇನ್ಸ್ಪೆಕ್ಟರ್, ಸ್ಥಳೀಯ ಅಧಿಕಾರಿಗೆ ಘೆರಾವ್ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು