7:58 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Mangaluru | ಮೀನುಗಾರ ಜೀವನೋಪಾಯ ರಕ್ಷಿಸಲು ಸರಕಾರ ಬದ್ಧ: ಮಂಗಳೂರಿನಲ್ಲಿ ಸಚಿವ ಮಂಕಾಳ ವೈದ್ಯ

08/06/2025, 11:59

ಮಂಗಳೂರು(reporterkarnataka.com): ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶ ಮಂಗಳೂರಿನ ಕೋಸ್ಟ್‌ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.

ಸಚಿವರು ಮಾತನಾಡಿ, ಮೀನುಗಾರ ಸಮುದಾಯದ ಜೀವನೋಪಾಯವನ್ನು ರಕ್ಷಿಸಲು ಸರಕಾರ ಎಲ್ಲ ಕ್ರಮ ಕೈಗೊಳ್ಳಲಿದೆ. ಮೀನುಗಾರರು ತಮ್ಮ ಜೀವವನ್ನು ಪಣಕ್ಕಿಟ್ಟು ಮೀನುಗಾರಿಕೆಗೆ ತೆರಳುತ್ತಾರೆ. ಇವರ ಸುರಕ್ಷತೆ ನಮ್ಮೆಲ್ಲರ ಆದ್ಯತೆಯಾಗಿದೆ. ಸಮುದ್ರದಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಅಪಾಯಗಳನ್ನು ತಗ್ಗಿಸಲು ಎಲ್ಲರೂ ಕಟಿಬದ್ಧರಾಗಿರಬೇಕು ಎಂದು ಹೇಳಿದರು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು