12:27 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Mangaluru | ಮೀನುಗಾರ ಜೀವನೋಪಾಯ ರಕ್ಷಿಸಲು ಸರಕಾರ ಬದ್ಧ: ಮಂಗಳೂರಿನಲ್ಲಿ ಸಚಿವ ಮಂಕಾಳ ವೈದ್ಯ

08/06/2025, 11:59

ಮಂಗಳೂರು(reporterkarnataka.com): ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶ ಮಂಗಳೂರಿನ ಕೋಸ್ಟ್‌ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.

ಸಚಿವರು ಮಾತನಾಡಿ, ಮೀನುಗಾರ ಸಮುದಾಯದ ಜೀವನೋಪಾಯವನ್ನು ರಕ್ಷಿಸಲು ಸರಕಾರ ಎಲ್ಲ ಕ್ರಮ ಕೈಗೊಳ್ಳಲಿದೆ. ಮೀನುಗಾರರು ತಮ್ಮ ಜೀವವನ್ನು ಪಣಕ್ಕಿಟ್ಟು ಮೀನುಗಾರಿಕೆಗೆ ತೆರಳುತ್ತಾರೆ. ಇವರ ಸುರಕ್ಷತೆ ನಮ್ಮೆಲ್ಲರ ಆದ್ಯತೆಯಾಗಿದೆ. ಸಮುದ್ರದಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಅಪಾಯಗಳನ್ನು ತಗ್ಗಿಸಲು ಎಲ್ಲರೂ ಕಟಿಬದ್ಧರಾಗಿರಬೇಕು ಎಂದು ಹೇಳಿದರು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು