6:14 PM Sunday21 - June 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ

18/12/2024, 20:32

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಅವರ ಸಮಕ್ಷಮದಲ್ಲಿ ಮುಖ್ಯಮಂತ್ರಿಯವರಿಗೆ ಮಂಗಳೂರು ವಕೀಲರ ಸಂಘ ದ ಪರವಾಗಿ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಸಂಘದ ಅಧ್ಯಕ್ಷ ಎಚ್. ವಿ. ರಾಘವೇಂದ್ರ ಮತ್ತು ಹಿರಿಯ ವಕೀಲರಾದ ಎಂ.ಪಿ. ನೊರೊನ್ಹಾ ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ವನ್ನು ಜರೂರಾಗಿ ಸ್ಥಾಪಿಸುವ ಬಗ್ಗೆ ಮನವರಿಕೆ ಮಾಡಿದರು.


ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರು ಹೈಕೋರ್ಟ್ ನ್ಯಾಯಾಧೀಶ ರೊಂದಿಗೆ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುದಾಗಿ ತಿಳಿಸಿರುತ್ತಾರೆ. ನಿಯೋಗದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ವಕೀಲರದ ಮೋನಪ್ಪ ಭಂಡಾರಿ ಹಾಗೂ ಹಿರಿಯ ವಕೀಲರಾದ ಟಿ. ನಾರಾಯಣ ಪೂಜಾರಿ, ಯಶವಂತ ಮರೋಳಿ, ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಶಾಲಿನಿ, ಸುಮನಾ ಶರಣ್, ಸಂತೋಷ್ ಕುಮಾರ್, ದಿನಕರ್ ಶೆಟ್ಟಿ, ರಾಘವೇಂದ್ರ ರಾವ್, ಪ್ರಮೋದ್ ಕೆರ್ವಾಶೆ, ಜಗದೀಶ್ ಕೆ. ಆರ್. ವಿಜಯ್ ಮಹಾತೇಶ್ ಸತೀಶ್ ಕುಮಾರ್, ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು