1:08 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ

18/12/2024, 20:32

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಅವರ ಸಮಕ್ಷಮದಲ್ಲಿ ಮುಖ್ಯಮಂತ್ರಿಯವರಿಗೆ ಮಂಗಳೂರು ವಕೀಲರ ಸಂಘ ದ ಪರವಾಗಿ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಸಂಘದ ಅಧ್ಯಕ್ಷ ಎಚ್. ವಿ. ರಾಘವೇಂದ್ರ ಮತ್ತು ಹಿರಿಯ ವಕೀಲರಾದ ಎಂ.ಪಿ. ನೊರೊನ್ಹಾ ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ವನ್ನು ಜರೂರಾಗಿ ಸ್ಥಾಪಿಸುವ ಬಗ್ಗೆ ಮನವರಿಕೆ ಮಾಡಿದರು.


ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರು ಹೈಕೋರ್ಟ್ ನ್ಯಾಯಾಧೀಶ ರೊಂದಿಗೆ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುದಾಗಿ ತಿಳಿಸಿರುತ್ತಾರೆ. ನಿಯೋಗದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ವಕೀಲರದ ಮೋನಪ್ಪ ಭಂಡಾರಿ ಹಾಗೂ ಹಿರಿಯ ವಕೀಲರಾದ ಟಿ. ನಾರಾಯಣ ಪೂಜಾರಿ, ಯಶವಂತ ಮರೋಳಿ, ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಶಾಲಿನಿ, ಸುಮನಾ ಶರಣ್, ಸಂತೋಷ್ ಕುಮಾರ್, ದಿನಕರ್ ಶೆಟ್ಟಿ, ರಾಘವೇಂದ್ರ ರಾವ್, ಪ್ರಮೋದ್ ಕೆರ್ವಾಶೆ, ಜಗದೀಶ್ ಕೆ. ಆರ್. ವಿಜಯ್ ಮಹಾತೇಶ್ ಸತೀಶ್ ಕುಮಾರ್, ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು