5:52 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ

26/10/2022, 21:02

ಮಂಗಳೂರು(reporterkarnataka.com):ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ತೀರ್ಮಾನದ ಭಾಗವಾಗಿ ಸಮಾನ ಮನಸ್ಕರು ಮಂಗಳೂರು ಇದರ ಆಶ್ರಯದಲ್ಲಿ ಬುಧವಾರ ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವ್ರತ್ತದಲ್ಲಿ ಸೌಹಾರ್ದ ದೀಪಾವಳಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಯಿತು.


ಸರ್ವ ಜನತೆಯ ಮನೆ ಮನ ಬೆಳಗಿಸುವ ಹಬ್ಬವಾದ ದೀಪಾವಳಿಯು ಅಜ್ಞಾನ, ಅಂಧ ಶ್ರದ್ದೆ, ದ್ವೇಷ ತುಂಬಿದ ಕತ್ತಲೆಯನ್ನು ಹೋಗಲಾಡಿಸಿ, ವಿಜ್ಞಾನ, ವೈಜ್ಞಾನಿಕ ಮನೋಭಾವ,ಪ್ರೀತಿ ತುಂಬಿದ ಬೆಳಕನ್ನು ಮೂಡಿಸಬೇಕಾಗಿದೆ. ಆ ಮೂಲಕ ಸೌಹಾರ್ದತೆ ಮಾನವೀಯತೆ ಬೆಳಗಿಸಬೇಕೆಂಬ ಆಶಯದೊಂದಿಗೆ ಜರುಗಿದ ದೀಪಾವಳಿ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಡಿವೈಎಫ್ ಐ ನಾಯಕರಾದ ಮುನೀರ್ ಕಾಟಿಪಳ್ಳ, ಮಾಜಿ ಉಪ ಮೇಯರ್ ಮಹಮ್ಮದ್ ಕುಂಜತ್ತಬೈಲ್, ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಯುವಜನ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ತಯ್ಯೂಬ್ ಬೆಂಗರೆ, ಸಾಮಾಜಿಕ ಚಿಂತಕರಾದ ಅಸುಂತ ಡಿಸೋಜ, ಕ್ವೀನಿ ಪರ್ಸಿ ಆನಂದ್, ಶಾಹಿರಾ ಮರಿಯಂ, ಶಹನಾಜ್, ಸಾಮಾಜಿಕ ಕಾರ್ಯಕರ್ತರಾದ ಆರೀಫ್,ಸಾಲಿ, ಸಿರಾಜ್, ಸತ್ತಾರ್,ದಿವಾಕರ ಬೋಳೂರು, ಕಾಸಿಂ,ಉದ್ಯಮಿಗಳಾದ ಮುತ್ತಲೀಫ್ ಮುಂತಾದವರು ಹಾಜರಿದ್ದರು.
ಹಾಡುಗಾರ್ತಿ ಮೇಘನಾ ಕುಂದಾಪುರರವರಿಂದ ಸೌಹಾರ್ದ ಹಾಡುಗಳು ಪ್ರಸ್ತುತಗೊಂಡವು.ಬಳಿಕ ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು