10:28 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ರೋಶನಿ ನಿಲಯಲ್ಲಿ ಅಮರ ಮಿಯಾವಾಕಿ ವನ ಉದ್ಘಾಟನೆ

06/08/2025, 23:38

ಮಂಗಳೂರು(reporterkarnataka.com): ಡಾ.ಒಲಿಂಡಾ ಪೆರೇರ ಅವರ ಶತಮಾನೋತ್ಸವ ಅಂಗವಾಗಿ ರೋಶನಿ ನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಇನ್‌ಸ್ಟಿಟ್ಯೂಷನ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ರೋಶನಿ ನಿಲಯ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಮಿಯಾವಾಕಿ ವನವನ್ನು ಲೋಕಾರ್ಪಣೆಗೊಳಿಸಲಾಯಿತು.
ಮುಖ್ಯ ಅತಿಥಿ, ಸಿಎಫ್‌ಎಎಲ್‌ನ ಸಂಶೋಧನಾ ನಿರ್ದೇಶಕಿ ಮತ್ತು ಎಎಂಎಆರ್‌ಆರ್‌ ಅಭಿಯಾನದ ಸಂಚಾಲಕಿ ಡಾ.ಸ್ಮಿತಾ ಹೆಗ್ಡೆ ಮಾತನಾಡಿ, ಇಂದು ಪರಿಸರದಲ್ಲಿ ಆಗುತ್ತಿರುವ ಪಲ್ಲಟಗಳು ಹಾಗೂ ಸುಸ್ಥಿರತೆಯನ್ನು ಸಾಧಿಸುವಲ್ಲಿ ನಮ್ಮೆಲ್ಲರ ವೈಯಕ್ತಿಕ ಹಾಗೂ ಸಾಮೂಹಿಕ ಪರಿಸರ ಪೂರಕ ಚಟುವಟಿಕೆಗಳ ಅಗತ್ಯದ ಕುರಿತು ಪ್ರತಿಪಾದಿಸಿ, ನಗರ ಪ್ರದೇಶಗಳಲ್ಲಿ ಹಸಿರು ಸ್ಥಳಗಳನ್ನು ಪುನರುತ್ಪಾದಿಸುವಲ್ಲಿ ಮಿಯಾವಾಕಿ ಅರಣ್ಯಗಳ ಪರಿಣಾಮಕಾರಿ ಅನುಷ್ಠಾನಗಳ ಅಗತ್ಯವನ್ನು ವಿವರಿಸಿದರು. ಪರಿಸರವಾದಿ ಜೀತ್ ಮಿಲನ್ ರೋಶ್‌ ಮಾತನಾಡಿ, ಮಿಯಾವಾಕಿ ಕಾಡುಗಳೆಂಬ ದಟ್ಟವಾದ ಮತ್ತು ವೇಗವಾಗಿ ಬೆಳೆಯುತ್ತಿರುವ ತೋಟಗಾರಿಕೆ ತಂತ್ರವು ನಗರ ಪ್ರದೇಶಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು, ಜೀವವೈವಿಧ್ಯತೆಯನ್ನು ಸುಧಾರಿಸಲು ಮತ್ತು ಸುಸ್ಥಿರ ಪರಿಸರ ವ್ಯವಸ್ಥೆಗಳನ್ನು ರಚಿಸಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ವಿವರಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್, ರೋಶನಿ ನಿಲಯ ನಿವೃತ್ತ ಪ್ರಾಂಶುಪಾಲೆ ಡಾ.ಜಸಿಂತಾ ಡಿಸೋಜ, ಅಮರ ಅಭಿಯಾನದ ಸಹ-ಸಂಚಾಲಕಿ ಅಶ್ವಿನಿ ಭಟ್, ಆರ್‌ಎಎ ಅಧ್ಯಕ್ಷ ಆನಂದ್ ಡಿಸಿಲ್ವ ಮತ್ತು ಹಳೇ ವಿದ್ಯಾರ್ಥಿ ಕಿಶೋರ್ ಅತ್ತಾವರ್ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರೊ.ಸಿಸಿಲಿಯಾ ಫರಿದಾ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ರೋಶನಿ ನಿಲಯದ ವಿಸ್ತರಣಾ ಸೇವಾ ಅಧಿಕಾರಿ ಡಾ.ಅನುಸೂಯಾ ಕಾಮತ್ ಸ್ವಾಗತಿಸಿದರು. ಎನ್ನೆಸ್ಸೆಸ್‌ ಕಾರ್ಯಕ್ರಮ ಅಧಿಕಾರಿ ಡಾ.ಪ್ರಶಾಂತ್ ಭಟ್‌ ವಂದಿಸಿದರು. ಬ್ರಿನೆಲ್ಲೆ ಡಿಯೋಲಾ ಫರ್ನಾಂಡಿಸ್ ಕಾರ್ಯ್ರಕಮ ನಿರ್ವಹಿಸಿದರು. ಅತಿಥಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ಮಿಯಾವಾಕಿ ಅರಣ್ಯ ವಿಧಾನ ಬಳಸಿಕೊಂಡು ಸಸಿಗಳನ್ನು ನೆಟ್ಟು ಅಭಿಯಾನದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು