12:37 AM Thursday2 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

Mangaluru | ರೋಶನಿ ನಿಲಯಲ್ಲಿ ಅಮರ ಮಿಯಾವಾಕಿ ವನ ಉದ್ಘಾಟನೆ

06/08/2025, 23:38

ಮಂಗಳೂರು(reporterkarnataka.com): ಡಾ.ಒಲಿಂಡಾ ಪೆರೇರ ಅವರ ಶತಮಾನೋತ್ಸವ ಅಂಗವಾಗಿ ರೋಶನಿ ನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಇನ್‌ಸ್ಟಿಟ್ಯೂಷನ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ರೋಶನಿ ನಿಲಯ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಮಿಯಾವಾಕಿ ವನವನ್ನು ಲೋಕಾರ್ಪಣೆಗೊಳಿಸಲಾಯಿತು.
ಮುಖ್ಯ ಅತಿಥಿ, ಸಿಎಫ್‌ಎಎಲ್‌ನ ಸಂಶೋಧನಾ ನಿರ್ದೇಶಕಿ ಮತ್ತು ಎಎಂಎಆರ್‌ಆರ್‌ ಅಭಿಯಾನದ ಸಂಚಾಲಕಿ ಡಾ.ಸ್ಮಿತಾ ಹೆಗ್ಡೆ ಮಾತನಾಡಿ, ಇಂದು ಪರಿಸರದಲ್ಲಿ ಆಗುತ್ತಿರುವ ಪಲ್ಲಟಗಳು ಹಾಗೂ ಸುಸ್ಥಿರತೆಯನ್ನು ಸಾಧಿಸುವಲ್ಲಿ ನಮ್ಮೆಲ್ಲರ ವೈಯಕ್ತಿಕ ಹಾಗೂ ಸಾಮೂಹಿಕ ಪರಿಸರ ಪೂರಕ ಚಟುವಟಿಕೆಗಳ ಅಗತ್ಯದ ಕುರಿತು ಪ್ರತಿಪಾದಿಸಿ, ನಗರ ಪ್ರದೇಶಗಳಲ್ಲಿ ಹಸಿರು ಸ್ಥಳಗಳನ್ನು ಪುನರುತ್ಪಾದಿಸುವಲ್ಲಿ ಮಿಯಾವಾಕಿ ಅರಣ್ಯಗಳ ಪರಿಣಾಮಕಾರಿ ಅನುಷ್ಠಾನಗಳ ಅಗತ್ಯವನ್ನು ವಿವರಿಸಿದರು. ಪರಿಸರವಾದಿ ಜೀತ್ ಮಿಲನ್ ರೋಶ್‌ ಮಾತನಾಡಿ, ಮಿಯಾವಾಕಿ ಕಾಡುಗಳೆಂಬ ದಟ್ಟವಾದ ಮತ್ತು ವೇಗವಾಗಿ ಬೆಳೆಯುತ್ತಿರುವ ತೋಟಗಾರಿಕೆ ತಂತ್ರವು ನಗರ ಪ್ರದೇಶಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು, ಜೀವವೈವಿಧ್ಯತೆಯನ್ನು ಸುಧಾರಿಸಲು ಮತ್ತು ಸುಸ್ಥಿರ ಪರಿಸರ ವ್ಯವಸ್ಥೆಗಳನ್ನು ರಚಿಸಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ವಿವರಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್, ರೋಶನಿ ನಿಲಯ ನಿವೃತ್ತ ಪ್ರಾಂಶುಪಾಲೆ ಡಾ.ಜಸಿಂತಾ ಡಿಸೋಜ, ಅಮರ ಅಭಿಯಾನದ ಸಹ-ಸಂಚಾಲಕಿ ಅಶ್ವಿನಿ ಭಟ್, ಆರ್‌ಎಎ ಅಧ್ಯಕ್ಷ ಆನಂದ್ ಡಿಸಿಲ್ವ ಮತ್ತು ಹಳೇ ವಿದ್ಯಾರ್ಥಿ ಕಿಶೋರ್ ಅತ್ತಾವರ್ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರೊ.ಸಿಸಿಲಿಯಾ ಫರಿದಾ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ರೋಶನಿ ನಿಲಯದ ವಿಸ್ತರಣಾ ಸೇವಾ ಅಧಿಕಾರಿ ಡಾ.ಅನುಸೂಯಾ ಕಾಮತ್ ಸ್ವಾಗತಿಸಿದರು. ಎನ್ನೆಸ್ಸೆಸ್‌ ಕಾರ್ಯಕ್ರಮ ಅಧಿಕಾರಿ ಡಾ.ಪ್ರಶಾಂತ್ ಭಟ್‌ ವಂದಿಸಿದರು. ಬ್ರಿನೆಲ್ಲೆ ಡಿಯೋಲಾ ಫರ್ನಾಂಡಿಸ್ ಕಾರ್ಯ್ರಕಮ ನಿರ್ವಹಿಸಿದರು. ಅತಿಥಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ಮಿಯಾವಾಕಿ ಅರಣ್ಯ ವಿಧಾನ ಬಳಸಿಕೊಂಡು ಸಸಿಗಳನ್ನು ನೆಟ್ಟು ಅಭಿಯಾನದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು