10:36 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Mangaluru | ರೋಶನಿ ನಿಲಯಲ್ಲಿ ಅಮರ ಮಿಯಾವಾಕಿ ವನ ಉದ್ಘಾಟನೆ

06/08/2025, 23:38

ಮಂಗಳೂರು(reporterkarnataka.com): ಡಾ.ಒಲಿಂಡಾ ಪೆರೇರ ಅವರ ಶತಮಾನೋತ್ಸವ ಅಂಗವಾಗಿ ರೋಶನಿ ನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಇನ್‌ಸ್ಟಿಟ್ಯೂಷನ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ರೋಶನಿ ನಿಲಯ ಹಳೇ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಮಿಯಾವಾಕಿ ವನವನ್ನು ಲೋಕಾರ್ಪಣೆಗೊಳಿಸಲಾಯಿತು.
ಮುಖ್ಯ ಅತಿಥಿ, ಸಿಎಫ್‌ಎಎಲ್‌ನ ಸಂಶೋಧನಾ ನಿರ್ದೇಶಕಿ ಮತ್ತು ಎಎಂಎಆರ್‌ಆರ್‌ ಅಭಿಯಾನದ ಸಂಚಾಲಕಿ ಡಾ.ಸ್ಮಿತಾ ಹೆಗ್ಡೆ ಮಾತನಾಡಿ, ಇಂದು ಪರಿಸರದಲ್ಲಿ ಆಗುತ್ತಿರುವ ಪಲ್ಲಟಗಳು ಹಾಗೂ ಸುಸ್ಥಿರತೆಯನ್ನು ಸಾಧಿಸುವಲ್ಲಿ ನಮ್ಮೆಲ್ಲರ ವೈಯಕ್ತಿಕ ಹಾಗೂ ಸಾಮೂಹಿಕ ಪರಿಸರ ಪೂರಕ ಚಟುವಟಿಕೆಗಳ ಅಗತ್ಯದ ಕುರಿತು ಪ್ರತಿಪಾದಿಸಿ, ನಗರ ಪ್ರದೇಶಗಳಲ್ಲಿ ಹಸಿರು ಸ್ಥಳಗಳನ್ನು ಪುನರುತ್ಪಾದಿಸುವಲ್ಲಿ ಮಿಯಾವಾಕಿ ಅರಣ್ಯಗಳ ಪರಿಣಾಮಕಾರಿ ಅನುಷ್ಠಾನಗಳ ಅಗತ್ಯವನ್ನು ವಿವರಿಸಿದರು. ಪರಿಸರವಾದಿ ಜೀತ್ ಮಿಲನ್ ರೋಶ್‌ ಮಾತನಾಡಿ, ಮಿಯಾವಾಕಿ ಕಾಡುಗಳೆಂಬ ದಟ್ಟವಾದ ಮತ್ತು ವೇಗವಾಗಿ ಬೆಳೆಯುತ್ತಿರುವ ತೋಟಗಾರಿಕೆ ತಂತ್ರವು ನಗರ ಪ್ರದೇಶಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು, ಜೀವವೈವಿಧ್ಯತೆಯನ್ನು ಸುಧಾರಿಸಲು ಮತ್ತು ಸುಸ್ಥಿರ ಪರಿಸರ ವ್ಯವಸ್ಥೆಗಳನ್ನು ರಚಿಸಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ವಿವರಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್, ರೋಶನಿ ನಿಲಯ ನಿವೃತ್ತ ಪ್ರಾಂಶುಪಾಲೆ ಡಾ.ಜಸಿಂತಾ ಡಿಸೋಜ, ಅಮರ ಅಭಿಯಾನದ ಸಹ-ಸಂಚಾಲಕಿ ಅಶ್ವಿನಿ ಭಟ್, ಆರ್‌ಎಎ ಅಧ್ಯಕ್ಷ ಆನಂದ್ ಡಿಸಿಲ್ವ ಮತ್ತು ಹಳೇ ವಿದ್ಯಾರ್ಥಿ ಕಿಶೋರ್ ಅತ್ತಾವರ್ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರೊ.ಸಿಸಿಲಿಯಾ ಫರಿದಾ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ರೋಶನಿ ನಿಲಯದ ವಿಸ್ತರಣಾ ಸೇವಾ ಅಧಿಕಾರಿ ಡಾ.ಅನುಸೂಯಾ ಕಾಮತ್ ಸ್ವಾಗತಿಸಿದರು. ಎನ್ನೆಸ್ಸೆಸ್‌ ಕಾರ್ಯಕ್ರಮ ಅಧಿಕಾರಿ ಡಾ.ಪ್ರಶಾಂತ್ ಭಟ್‌ ವಂದಿಸಿದರು. ಬ್ರಿನೆಲ್ಲೆ ಡಿಯೋಲಾ ಫರ್ನಾಂಡಿಸ್ ಕಾರ್ಯ್ರಕಮ ನಿರ್ವಹಿಸಿದರು. ಅತಿಥಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ಮಿಯಾವಾಕಿ ಅರಣ್ಯ ವಿಧಾನ ಬಳಸಿಕೊಂಡು ಸಸಿಗಳನ್ನು ನೆಟ್ಟು ಅಭಿಯಾನದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು