4:48 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

Mangaluru | ಗುಲಾಮಗಿರಿ ವ್ಯವಸ್ಥೆ ಕಿತ್ತೆಸೆಯದೇ ಸ್ವಾತಂತ್ರ್ಯ ಯಶಸ್ವಿಯಾಗದು: ಸಿಎಂ ಸಿದ್ದರಾಮಯ್ಯ

03/12/2025, 16:42

ಮಂಗಳೂರು(reporterkarnataka.com): ಆರ್ಥಿಕ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗದೇ, ಅಸಮಾನತೆ ಹೋಗಲಾಡಿಸದೆ, ಗುಲಾಮಗಿರಿ ವ್ಯವಸ್ಥೆಯನ್ನು ಕಿತ್ತೆಸೆಯದೇ ಸ್ವಾತಂತ್ರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೇರಳದ‌ ವರ್ಕಲ ಶಿವಗಿರಿ ಮಠ, ಮಂಗಳೂರು ವಿಶ್ವವಿದ್ಯಾಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ‘ಶತಮಾನದ ಮಹಾ ಪ್ರಸ್ಥಾನ ಬ್ರಹ್ಮಶ್ರೀ ನಾರಾಯಣ ಗುರು- ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ, ಗುರುವಿನ ಮಹಾ ಸಮಾಧಿ ಶತಾಬ್ಧಿ, ಸರ್ವ ಮತ ಸಮ್ಮೇಳನ‌ದ ಶತಮಾನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ, ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ಇನ್ನೂ ಗುಲಾಮಗಿರಿ ವ್ಯವಸ್ಥೆ ಬದಲಾಗಿಲ್ಲ. ಪ್ರಬಲ‌ ಸಮುದಾಯದ ವ್ಯಕ್ತಿ ಎದುರಾದಾಗ ಸ್ವಾಮಿ ಎನ್ನುವ, ದಲಿತ ಸಮುದಾಯದ ವ್ಯಕ್ತಿ ಎಷ್ಟೇ ಶ್ರೀಮಂತರಾದರೂ ಅವರನ್ನು ಏಕ ವಚನದಲ್ಲಿ ಮಾತನಾಡಿಸುವ ವ್ಯವಸ್ಥೆ ಈಗಲೂ ಇದೆ. ಇದೇ ಗುಲಾಮಗಿರಿಯ ಸಂಕೇತ.‌ ಇದನ್ನು ಕಿತ್ತೆಸೆಯದೇ ಸ್ವಾಭಿಮಾನ ಮೂಡಿಸಲು ಸಾಧ್ಯವಿಲ್ಲ.‌ ಇದನ್ನೇ ನಾರಾಯಣಗುರುಗಳು ಸಾರಿ ಸಾರಿ ಹೇಳಿದ್ದಾರೆ’ ಎಂದರು.
‘ಜಾತಿಯಿಂದ ಯಾರೂ ದೊಡ್ಡವರಾಗುವುದಿಲ್ಲ. ಯಾರೂ ಕೀಳೂ ಆಗುವುದಿಲ್ಲ. ಆದರೆ ವ್ಯಕ್ತಿತ್ವವನ್ನೂ ಜಾತಿ ನೋಡಿಯೇ ಅಳೆಯಲಾಗುತ್ತಿದೆ. ಸಮಾಜದಲ್ಲಿ ಜಾತಿ ಹೆಸರಿನಲ್ಲಿ ನಡೆಯುವ ತಾರತಮ್ಯಗಳು ದೂರವಾಗಬೇಕು. ಜಡತ್ವದ ಜಾತಿ ವ್ಯವಸ್ಥೆ ಬದಲಾಗಬೇಕು. ಅದಕ್ಕಾಗಿ ಮನುಷ್ಯತ್ವದಿಂದ ಕೂಡಿದ ಸಮಾಜ ಕಟ್ಟಬೇಕು’ ಎಂದರು.
‘1925ರಲ್ಲಿ ನಡೆದ ಮಹಾತ್ಮ ಗಾಂಧಿ ನಾರಾಯಣಗುರುಗಳ ನಡುವಿನ ಸಂವಾದ ಹಾಗೂ 1931ರಲ್ಲಿ ಗಾಂಧಿ ಮತ್ತು ಬಿ.ಆರ್.ಅಂಬೇಡ್ಕರ್ ನಡುವೆ ನಡೆದ ಸಂವಾದಗಳಿಗೆ ಐತಿಹಾಸಿಕ ಮಹತ್ವವಿದೆ. ಅವರು ಪ್ರತಿಪಾದಿಸಿದ ಮೌಲ್ಯಗಳ ಹಿಂದಿನ ಆಶಯ ಅರ್ಥ ಮಾಡಿಕೊಳ್ಳಬೇಕು. ಜಾತಿ ಧರ್ಮಗಳನ್ನು, ಮೀರಿ ಮನುಷ್ಯರಾಗಿ ಬಾಳಬೇಕು. ಸಂವಿಧಾನದಲ್ಲಿ ಅಳವಡಿಸಿಕೊಂಡ ಸಹಬಾಳ್ವೆ, ಧರ್ಮ‌ ಸಹಿಷ್ಣುತೆ ಭಾವನೆ ಬೆಳೆಸಿಕೊಂಡರೆ, ಸಾಮಾಜಿಕ‌ ಅಸಮಾನತೆ ನಿವಾರಣೆ ಆಗಲಿದೆ ಎಂದರು.
‘ಶಸ್ತ್ರಚಿಕಿತ್ಸೆಗೆ ಕುರುಬರದ್ದೇ ರಕ್ತ ಬೇಕು ಎಂದು ನಾನು ಕೇಳುವುದಿಲ್ಲ. ದಲಿತರ, ಕ್ರೈಸ್ತರ, ಮುಸ್ಲೀಮರ ರಕ್ತವಾದರೂ ಆಗುತ್ತದೆ. ಆದರೆ, ವಾಸಿ ಆದ ಬಳಿಕ‌ ನೀವು ಯಾವ ಜಾತಿ, ಯಾವ ಧರ್ಮ‌ಎಂದು ಕೇಳುತ್ತೇವೆ. ಅಷ್ಟರಮಟ್ಟಿಗೆ ನಾವು ಸ್ವಾರ್ಥಿಗಳು. ಇದನ್ನು ಬಿಡಬೇಕು.ಜಾತಿ ಹೆಸರಿನಲ್ಲಿ‌ ಜನರನ್ನು ಒಡೆಯುವ ಕೆಲಸ ಆಗಬಾರದು. ಎಲ್ಲರೂ ಮಾನವರಾಗಿ ಬದುಕಬೇಕು’ ಎಂದು ಅವರು ನುಡಿದರು.
‘ನಾರಾಯಣ ಗುರುಗಳ ಸಂದೇಶ ಎಲ್ಲರಿಗೂ ತಲುಪಬೇಕು ಎಂಬ ಕಾರಣಕ್ಕೆ 2016ರಲ್ಲಿ ನಮ್ಮ ಸರ್ಕಾರ ಅವರ ಜಯಂತಿ ಆಚರಿಸಲು ತೀರ್ಮಾನಿಸಿತ್ತು’ ಎಂದರು.
ಕೇರಳದ ವರ್ಕಲ ಶಿವಗಿರಿ ಮಠದವರು ರಾಜ್ಯದಲ್ಲಿ ಶಾಖಾ ಮಠವನ್ನು ಆರಂಭಿಸಲು 5 ಎಕರೆ ಜಮೀನು ಕೇಳಿದ್ದಾರೆ. ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಜಾಗ ಗುರುತಿಸಲು ಸೂಚಿಸಿದ್ದೇನೆ.‌ ನಮ್ಮ‌ ಸರ್ಕಾರ ಶಿವಗಿರಿ ಶಾಖಾ ಮಠ ಸ್ಥಾಪನೆಗೆ ಜಮೀನು ನೀಡಲು ಸಿದ್ಧವಿದೆ ಎಂದು ಅವರು ಹೇಳಿದರು.
ಲೋಕಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್, ‘ಈಗಲೂ ಸಮಾಜದಲ್ಲಿ ಗಂಭಿರ ಪ್ರಮಾಣದಲ್ಲಿ ಅಸಮಾನತೆ ಇದೆ. ಸಂವಿಧಾನದ ಮೌಲ್ಯಗಳು ಬೆದರಿಕೆ ಎದುರಿಸುತ್ತಿವೆ. ನಾರಾಯಣಗುರು- ಗಾಂಧೀಜಿ ಅನುಯಾಯಿಗಳು ಅವರ ತತ್ವಗಳ ಅನುಷ್ಠಾನಕ್ಕೆ ಪ್ರಯತ್ನಿಸಬೇಕು’ ಎಂದರು.

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ , ‘ಇಂದು ಒಂದು ದಿನ ಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ.‌ ಇದರ ಸಂದೇಶ ವಿದ್ಯಾರ್ಥಿಗಳಿಗೆ, ಯುವ ಪೀಳಿಗೆಗೆ ತಲುಪಬೇಕು. ಈ ಐತಿಹಾಸಿಕ ಕಾರ್ಯಕ್ರಮ‌ದ ನೆನಪು ಸದಾ ಹಸಿರಾಗಿರುವಂತೆ ಮಾಡಲು ಈ ಮೈದಾನಕ್ಕೆ ಗುರು-ಗಾಂಧಿ ಮೈದಾನ ಎಂದು ನಾಮಕರಣ ಮಾಡಲಿದ್ದೇವೆ. ಇಲ್ಲಿ ಉದ್ಯಾನ, ಕ್ರೀಡಾಂಗಣ ಅಭಿವೃದ್ದಿ ಪಡಿಸಲಿದ್ದೇವೆ ಎಂದು ಹೇಳಿದರು.
ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ ಹಾಗೂ ಶಿವಗಿರಿ ಮಠದ ಕಾರ್ಯದರ್ಶಿ ಶುಭಾಂಗಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಗೃಹ ಸಚಿವ ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಲಕ್ಷ್ಮೀ ಹೆಬ್ಬಾಳಕರ್, ವಸತಿ ಮತ್ತು ವಕ್ಪ್ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್,ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸಂಸದ ರಾಜಮೋಹನ್ ಉನ್ನಿತಾನ್, ಕಾರ್ಯಕ್ರಮ ಆಯೋಜನೆ ಕೇಂದ್ರ ಸಮಿತಿಯ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಪ್ರಧಾನ ಸಂಚಾಲಕ ಪಿ.ವಿ.ಮೋಹನ್, ಮುಖಂಡ ಬಿ.ಜನಾರ್ಧನ ಪೂಜಾರಿ, ದಕ್ಷಿಣ ಕನದನಡ ಜಿಲ್ಲೆಯ ಶಾಸಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು