8:08 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಇಂದಿನಿಂದ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

17/01/2025, 07:13

ಮಂಗಳೂರು (reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಶಾಸಕ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರ ಉಪಸ್ಥಿತಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರಿನಲ್ಲಿ ಕ್ರೀಡೆಗಳಾದ ಬ್ಯಾಡ್ಮಿಂಟನ್, ಬಾಸ್ಕೆಟ್‍ಬಾಲ್, ಫೆನ್ಸಿಂಗ್ (ಕತ್ತಿವರಸೆ) ಫುಟ್ಬಾಲ್, ಹ್ಯಾಂಡ್‍ಬಾಲ್, ಖೋಖೋ, ನೆಟ್ಬಾಲ್, ಈಜು, ಟೇಕ್ವೊಂಡೋ, ವಾಲಿಬಾಲ್, ವೇಯ್ಟ್ ಲಿಫ್ಟಿಂಗ್, ವುಶು ಕ್ರೀಡಾಕೂಟ ಆಯೋಜಿಸಲಾಗಿದೆ.
ಆರ್ಚರಿ(ಬಿಲ್ಲುಗಾರಿಕೆ), ಅಥ್ಲೆಟಿಕ್ಸ್ , ಬಾಕ್ಸಿಂಗ್, ಸೈಕ್ಲಿಂಗ್, ಜುಡೋ, ಕಬಡ್ಡಿ, ಕುಸ್ತಿ, ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳನ್ನು ಉಡುಪಿ ಜಿಲ್ಲೆಯಲ್ಲಿ ಆಯೋಜನೆಗೊಂಡಿದ್ದು ಹಾಕಿ, ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್ ಕ್ರೀಡೆಗಳನ್ನು ಮಣಿಪಾಲದಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದ ಸಮಾರೋಪ ಸಮಾರಂಭ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 23 ರಂದು ಸಂಜೆ 4:30 ಗಂಟೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು