8:50 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ

01/05/2023, 18:27

ಮಂಗಳೂರು(reporterkarnataka.com):
ನಗರದ ಫಳ್ನೀರ್ ನಲ್ಲಿರುವ ಇಂದಿರಾ ಎಜುಕೇಷನ್‌ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್‌ ಜುಬಿಲಿ ಸಭಾಂಗಣದಲ್ಲಿ ಶನಿವಾರ ನಡಯಿತು.
ಮುಖ್ಯ ಅತಿಥಿಯಾಗಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎನ್.ರಾಮಕೃಷ್ಣ ರೆಡ್ಡಿ, ಗೌರವ ಅತಿಥಿಯಾಗಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಪ್ರೊ.ಡಾ.ಯು.ಟಿ. ಇಫ್ತಿಕಾರ್ ಅಲಿ ಪಾಲ್ಗೊಂಡಿದ್ದರು.
ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಗ್ರೀಶಾ ಜೋಸ್; ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ ಡಾ.ಎನ್. ಜಿಯೋವಿಯಾ ಜಾರ್ಜ್ (ಪಿಟಿ), ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲೆ ಕೃತಿಕಾ, ಅರೆ ವೈದ್ಯಕೀಯ ವಿಜ್ಞಾನಗಳ ಉಸ್ತುವಾರಿ ಪ್ರಾಂಶುಪಾಲೆ ಮೀಜಾ ಪಾಲ್ಗೊಂಡಿದ್ದರು.
ವಾರ್ಷಿಕ ವರದಿಯನ್ನು ಆಯಾಯ ಕಾಲೇಜುಗಳ ಪ್ರಾಂಶುಪಾಲರು ವಾಚನ ಮಾಡಿದರು. ಸಮಾರಂಭದ ಮುಖ್ಯ ಅತಿಥಿ ಡಾ.ಎನ್.ರಾಮಕೃಷ್ಣರೆಡ್ಡಿ ಅವರು, ಆರೋಗ್ಯ ವೃತ್ತಿಪರರ ಪ್ರಾಮುಖ್ಯತೆ ಮತ್ತು ವೃತ್ತಿಯ ಅಭಿವೃದ್ಧಿಗಾಗಿ ಡಾ.ಯು.ಟಿ.ಇಫ್ತಿಕರ್ ಅಲಿ ಅವರು ನೀಡಿದ ಅಗಾಧ ಕೊಡುಗೆ ಕುರಿತು ತಮ್ಮ ವಿಚಾರವನ್ನು ಹಂಚಿಕೊಂಡರು.
ಎಂಎಸ್ಸಿ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಅರೆ ವೈದ್ಯಕೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರಮಾಣ ಪತ್ರ ನೀಡಲಾಯಿತು.
ಇಂದಿರಾ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಇವಾನ್ಸಾ ರಾಲಿನ್ ವಾರ್ಜ್ರಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಸಿಜಿ ಆಗಸ್ಟಿನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು