9:43 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Mangaluru | ಅಂತರ್ ಜಿಲ್ಲಾ ಖದೀಮ ಕಳ್ಳನ ಸೆರೆ: 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ವಶ

01/03/2025, 22:58

ಮಂಗಳೂರು(reporterkarnataka.com): ದಿಚಕ್ರ ವಾಹನಗಳನ್ನು ಕಳ್ಳತನ ಮಾಡುವುದರಲ್ಲಿ ನಿಸ್ಸೀಮನಾದ
ಅಂತರ್ ಜಿಲ್ಲಾ ಕಳ್ಳನನ್ನು ನಗರದ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪ್ರಮುಖ ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (25) ಎಂದು ಗುರುತಿಸಲಾಗಿದೆ.
ಬಂಧಿತ ಮಣಿಕಂಠ ಗೌಡನಿಂದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಜಾತ್ರೆ, ಕಂಬಳೋತ್ಸವ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗಿರುವ ಬೈಕ್‌ಗಳನ್ನು ಕದಿಯುತ್ತಿದ್ದ ಖದೀಮ, ವಾಹನಗಳ ಇಗ್ನಿಷನ್ ಸಾಕೆಟ್‌ನ ಪ್ಲಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಕ್ಷಣಾರ್ಧದಲ್ಲಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳಿಗೆ ರೀಸೇಲ್ ವ್ಯಾಲ್ಯೂ ಇರುವುದರಿಂದ ಅದನ್ನೇ ಟಾರ್ಗೆಟ್ ಮಾಡುತ್ತಿದ್ದ ಮಣಿಕಂಠ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಕುಟುಂಬದೊಂದಿಗೆ ಮೂಡಬಿದಿರೆಯಲ್ಲಿ ವಾಸ್ತವ್ಯವಿದ್ದ ಎಂದು ತಿಳಿದು ಬಂದಿದೆ.
ಕದ್ದ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದ ಕಾರ್ಕಳದ ಸತೀಶ್ ಬಂಗೇರ, ಮೂಡಬಿದಿರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬರನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು