7:58 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Mangaluru | ಅಂತರ್ ಜಿಲ್ಲಾ ಖದೀಮ ಕಳ್ಳನ ಸೆರೆ: 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ವಶ

01/03/2025, 22:58

ಮಂಗಳೂರು(reporterkarnataka.com): ದಿಚಕ್ರ ವಾಹನಗಳನ್ನು ಕಳ್ಳತನ ಮಾಡುವುದರಲ್ಲಿ ನಿಸ್ಸೀಮನಾದ
ಅಂತರ್ ಜಿಲ್ಲಾ ಕಳ್ಳನನ್ನು ನಗರದ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪ್ರಮುಖ ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (25) ಎಂದು ಗುರುತಿಸಲಾಗಿದೆ.
ಬಂಧಿತ ಮಣಿಕಂಠ ಗೌಡನಿಂದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಜಾತ್ರೆ, ಕಂಬಳೋತ್ಸವ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗಿರುವ ಬೈಕ್‌ಗಳನ್ನು ಕದಿಯುತ್ತಿದ್ದ ಖದೀಮ, ವಾಹನಗಳ ಇಗ್ನಿಷನ್ ಸಾಕೆಟ್‌ನ ಪ್ಲಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಕ್ಷಣಾರ್ಧದಲ್ಲಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ. ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳಿಗೆ ರೀಸೇಲ್ ವ್ಯಾಲ್ಯೂ ಇರುವುದರಿಂದ ಅದನ್ನೇ ಟಾರ್ಗೆಟ್ ಮಾಡುತ್ತಿದ್ದ ಮಣಿಕಂಠ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಕುಟುಂಬದೊಂದಿಗೆ ಮೂಡಬಿದಿರೆಯಲ್ಲಿ ವಾಸ್ತವ್ಯವಿದ್ದ ಎಂದು ತಿಳಿದು ಬಂದಿದೆ.
ಕದ್ದ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದ ಕಾರ್ಕಳದ ಸತೀಶ್ ಬಂಗೇರ, ಮೂಡಬಿದಿರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬರನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು