7:31 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಅಂತಾರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ: ತಣ್ಣೀರು ಬಾವಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ

06/10/2025, 22:58

ಮಂಗಳೂರು(reporterkarnataka.com): ರಾಜ್ಯ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ-2025ರ ಅಂಗವಾಗಿ ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ಯುವ ಸಂಘಟನೆಗಳ ಸಹಯೋಗದೊಂದಿಗೆ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಶುದ್ಧ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಪಾತ್ರವಹಿಸುವ ಅಗತ್ಯತೆಯನ್ನು ಅವರು ಒತ್ತಿ ಹೇಳಿದರು. ಸಾಮೂಹಿಕ ಹೊಣೆಗಾರಿಕೆ ಮತ್ತು ಪರಿಸರಪಾಲನೆಯ ಮಹತ್ವವನ್ನು ತಮ್ಮ ಸಂದೇಶದ ಮೂಲಕ ಯುವ ಮನಸ್ಸುಗಳಿಗೆ ತಲುಪಿಸಿದರು.


ಈ ಕಾರ್ಯಕ್ರಮವು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ದಿಲೀಪ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಂಚಾಲಕರಾದ ಚೇತನ್, ರಘುವೀರ ಸೂಟರ್ ಪೇಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಬೀಚ್ ಸ್ವಚ್ಛತಾ ಅಭಿಯಾನದಲ್ಲಿ 300ಕ್ಕೂ ಹೆಚ್ಚು ಜನರು ಉತ್ಸಾಹದಿಂದ ಭಾಗವಹಿಸಿದ್ದರು. ಇವರಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು, ಯುವ ಸಂಘಟನೆಗಳು, ಸ್ಥಳೀಯ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಮುದಾಯದ ಸದಸ್ಯರು ಸೇರಿದ್ದರು. ಭಾಗವಹಿಸಿದವರು ಬೀಚ್‌ನ ವಿವಿಧ ಭಾಗಗಳನ್ನು ಸ್ವಚ್ಛಗೊಳಿಸಿ, ನೈರ್ಮಲ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು