10:20 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಮಂಗಳೂರಿಗೆ ಜಲಸಿರಿ ಯೋಜನೆಯಡಿ 24/7 ಕುಡಿಯುವ ನೀರು ಪೂರೈಕೆ: 5 ಝೋನ್ ಗಳ ರಚನೆ

13/07/2021, 20:56

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿ 24/7 ಕುಡಿ ನೀರು ಯೋಜನೆಯ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಅಧಿಕಾರಿಗಳ‌ ಸಭೆ ನಡೆಯಿತು.

‌ಪ್ರಾಯೋಗಿಕವಾಗಿ ಪಾಲಿಕೆ ವ್ಯಾಪ್ತಿಯಲ್ಲಿ 5 ಝೋನ್ ಗಳನ್ನು ಆಯ್ಕೆಮಾಡಿ 24/7 ನೀರು ಸರಬರಾಜು ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈಗಾಗಲೇ ಸ್ಮಾರ್ಟ್ ಸಿಟಿ ಹಾಗೂ ಇತರೆ ಯೋಜನೆಗಳಡಿ ಕೈಗೊಂಡಿರುವ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳನ್ನು ನಡೆಸುವ‌ ವೇಳೆ ನೀರಿನ ಪೈಪ್ ಗಳ ಪರಿಶೀಲನೆಯ ಕ್ರಮ ಕೈಗೊಳ್ಳುವ ಕುರಿತು ಮೇಯರ್ ಸೂಚನೆ ನೀಡಿದ್ದಾರೆ. ಮುಖ್ಯ ಕೊಳವೆ ಹಾಗೂ ವಿತರಣಾ ಜಾಲಗಳ ಪರಿಶೀಲನೆಯನ್ನು ಅಗತ್ಯವಾಗಿ ನಡೆಸುವಂತೆ ಸೂಚನೆ ನೀಡಿಲಾಗಿದೆ. ಹಾಗೂ ಪ್ರತಿ 15 ದಿನಗಳಿಗೊಮ್ಮೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪಾಲಿಕೆಯ ಉಪಮೇಯರ್ ಸುಮಂಗಲ, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್, ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರು, ಪಾಲಿಕೆ ಸದಸ್ಯರು, ಜಲಸಿರಿ ಯೋಜನೆಯ ಅಧಿಕಾರಿಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು