11:21 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ 

08/03/2022, 11:42

ತೊಕ್ಕೊಟ್ಟು (reporterkarnataka.com): 

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ.

ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಸೌರವ್ ತನ್ನ ತಾಯಿ ಜತೆ ಆಗಮಿಸಿದ್ದ. 

ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್‍ ದೂರಿನಲ್ಲಿ ತಿಳಿಸಲಾಗಿದೆ.

ಮೃತರು ತಂದೆ ತಾಯಿ ಸಹೋದರ ಸಹೋದರಿಯರನ್ನು ಅಗಲಿದ್ದಾನೆ.ಉಳ್ಳಾಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು