11:34 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ 

08/03/2022, 11:42

ತೊಕ್ಕೊಟ್ಟು (reporterkarnataka.com): 

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ.

ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಸೌರವ್ ತನ್ನ ತಾಯಿ ಜತೆ ಆಗಮಿಸಿದ್ದ. 

ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್‍ ದೂರಿನಲ್ಲಿ ತಿಳಿಸಲಾಗಿದೆ.

ಮೃತರು ತಂದೆ ತಾಯಿ ಸಹೋದರ ಸಹೋದರಿಯರನ್ನು ಅಗಲಿದ್ದಾನೆ.ಉಳ್ಳಾಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು