3:30 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ 

08/03/2022, 11:42

ತೊಕ್ಕೊಟ್ಟು (reporterkarnataka.com): 

ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ.

ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆಯುತ್ತಿದ್ದು, ಹೀಗಾಗಿ ಪಿಲಾರು ಪ್ರಕಾಶ್ ನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಸೌರವ್ ತನ್ನ ತಾಯಿ ಜತೆ ಆಗಮಿಸಿದ್ದ. 

ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದ ಸೌರವ್ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆನ್ನಲಾಗಿದೆ. ಸಂಜೆಯ ವೇಳೆ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಗೈದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸ್‍ ದೂರಿನಲ್ಲಿ ತಿಳಿಸಲಾಗಿದೆ.

ಮೃತರು ತಂದೆ ತಾಯಿ ಸಹೋದರ ಸಹೋದರಿಯರನ್ನು ಅಗಲಿದ್ದಾನೆ.ಉಳ್ಳಾಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು