6:04 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ದಿಢೀರ್ ದಾಳಿ: ಒಂದೂವರೆ ತಾಸು ತಪಾಸಣೆ; ಬೀಡಿ, ಸಿಗರೇಟ್ ಮಾತ್ರ ಪತ್ತೆ

02/04/2023, 18:26

ಮಂಗಳೂರು(reporterkarnataka.com):ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ ಪೊಲೀಸರ ತಂಡ ನಗರದ ಜಿಲ್ಲಾ ಕಾರಾಗೃಹಕ್ಕೆ ದಾಳಿ ನಡೆಸಿ ತಪಾಸಣೆ ನಡೆಸಿತು.
ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


ದಾಳಿಯ ನಂತರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಧ್ಯಮದ ಜತೆಮಾತನಾಡಿ, ಜೈಲಿನಲ್ಲಿ ಬೀಡಿ ಮತ್ತು ಸಿಗರೇಟ್ ಹೊರತುಪಡಿಸಿ ಯಾವುದೇ ನಿಷೇಧಿತ ವಸ್ತುಗಳು ಪೊಲೀಸರಿಗೆ ಸಿಗಲಿಲ್ಲ. ಒಂದೂವರೆ ಗಂಟೆಯೊಳಗೆ ತಪಾಸಣೆ ಪೂರ್ಣಗೊಂಡಿತು. ಜೈಲಿನೊಳಗೆ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ಬರುವ ದಿನಗಳಲ್ಲಿ ಇಂತಹ ದಾಳಿಗಳನ್ನು ನಡೆಸಲಾಗುವುದು ಎಂದರು.
ಬೀಡಿ, ಸಿಗರೇಟ್‌ಗಳು ಕೈದಿಗಳಿಗೆ ಹೇಗೆ ರವಾನೆ ಆಗುತ್ತವೆ. ಎಂಬುದರ ಕುರಿತು ಜೈಲು ಅಧೀಕ್ಷಕರ ಜತೆಗೆ ಚರ್ಚೆ ಮಾಡಲಾಯಿತು. ಸಂಬಂಧಿಕರು ಮತ್ತು ಕುಟುಂಬ ಸದಸ್ಯರ ಭೇಟಿಯ ಸಮಯದಲ್ಲಿ ಅದನ್ನು ಪೂರೈಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು