11:01 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ

11/01/2023, 22:15

ಮಂಗಳೂರು(reporterkarnataka.com): ನಗರದಲ್ಲಿ ಕಾರ್ಯಾಚರಿಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗೆ ಡಿವೈಎಫ್ ಐ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಬುಧವಾರ ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು.

ಈ ವೇಳೆ ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ. ಇಂಮ್ತಿಯಾಜ್ ಮಾತನಾಡಿ, ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ ವ್ಯಾಪಾರಿಗಳು , ಕಾರ್ಮಿಕರು ,ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ. ಈ ಮೋಸದಾಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ತಮ್ಮ ಮನೆ, ಮಠ ಅಮೂಲ್ಯ ಸೊತ್ತುಗಳನ್ನು ಕಳಕೊಂಡು ಬೀದಿಗೆ ಬಿದ್ದಿವೆ. ಇಂತಹ ಅಕ್ರಮ ಜೂಜು ಕೇಂದ್ರಗಳ ವಿರುದ್ಧ ಸಾರ್ವಜನಿಕರು ಬಹಳಷ್ಟು ವಿರೋಧ ವ್ಯಕ್ತಪಡಿಸಿದರೂ ಸ್ಥಳೀಯ ಠಾಣೆಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬರೀ ತೋರಿಕೆಗಷ್ಟೆ ಬಂದ್ ಮಾಡುವ ನಾಟಕ ಮಾಡಿ ಮತ್ತೆ ಕೆಲದಿನದ ನಂತರ ಯಥಾ ಸ್ಥಿತಿಯಾಗಿ ಜೂಜು ಕೇಂದ್ರಗಳು ಕಾರ್ಯಾಚರಿಸುತ್ತವೆ ಎಂದರು.

ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರ್, ನವೀನ್ ಕೊಂಚಾಡಿ, ಹನೀಫ್ ಬೇಂಗ್ರೆ, ಮುಸ್ತಫ ಕಲ್ಲಕಟ್ಟೆ, ರಿಯಾಬ್, ಆಸೀಫ್, ಸಾಧಿಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು