2:50 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ

11/01/2023, 22:15

ಮಂಗಳೂರು(reporterkarnataka.com): ನಗರದಲ್ಲಿ ಕಾರ್ಯಾಚರಿಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗೆ ಡಿವೈಎಫ್ ಐ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಬುಧವಾರ ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು.

ಈ ವೇಳೆ ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ. ಇಂಮ್ತಿಯಾಜ್ ಮಾತನಾಡಿ, ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ ವ್ಯಾಪಾರಿಗಳು , ಕಾರ್ಮಿಕರು ,ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ. ಈ ಮೋಸದಾಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ತಮ್ಮ ಮನೆ, ಮಠ ಅಮೂಲ್ಯ ಸೊತ್ತುಗಳನ್ನು ಕಳಕೊಂಡು ಬೀದಿಗೆ ಬಿದ್ದಿವೆ. ಇಂತಹ ಅಕ್ರಮ ಜೂಜು ಕೇಂದ್ರಗಳ ವಿರುದ್ಧ ಸಾರ್ವಜನಿಕರು ಬಹಳಷ್ಟು ವಿರೋಧ ವ್ಯಕ್ತಪಡಿಸಿದರೂ ಸ್ಥಳೀಯ ಠಾಣೆಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬರೀ ತೋರಿಕೆಗಷ್ಟೆ ಬಂದ್ ಮಾಡುವ ನಾಟಕ ಮಾಡಿ ಮತ್ತೆ ಕೆಲದಿನದ ನಂತರ ಯಥಾ ಸ್ಥಿತಿಯಾಗಿ ಜೂಜು ಕೇಂದ್ರಗಳು ಕಾರ್ಯಾಚರಿಸುತ್ತವೆ ಎಂದರು.

ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರ್, ನವೀನ್ ಕೊಂಚಾಡಿ, ಹನೀಫ್ ಬೇಂಗ್ರೆ, ಮುಸ್ತಫ ಕಲ್ಲಕಟ್ಟೆ, ರಿಯಾಬ್, ಆಸೀಫ್, ಸಾಧಿಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು