9:51 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಂಗಳೂರು: ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ; ಚಾಲಕ ಸಾವು

03/02/2022, 15:16

ಮಂಗಳೂರು:(reporterkarnatak ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್‌ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ.

ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.


ಮೃತ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್ ಶರೀಫ್ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.

ಇಸ್ಮಾಯಿಲ್ ನಿನ್ನೆ ತನ್ನ ಟೂರಿಸ್ಟ್ ಕಾರನ್ನು ಮಧ್ಯಾಹ್ನ ಮಂಗಳಾದೇವಿ ಮಂಕಿಸ್ಟಾಂಡ್ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಹೃದಯಘಾತವಾಗಿದೆ.

ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಟೆಂಪೋ ಟ್ರಾವೆಲರ್‌ನ ಹಿಂಭಾಗದ ಎಡಬದಿಗೆ ಢಿಕ್ಕಿ ಹೊಡೆಯಿತು.

ಟೆಂಪೋಟ್ರಾವೆಲರ್ ಮುಂದೆ ನಿಂತಿದ್ದ ಬೈಕ್ ಅಪ್ಪಚ್ಚಿಯಾಗಿದೆ. ಅಪಘಾತದ ರಭಸಕ್ಕೆ ಇಸ್ಮಾಯೀಲ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸಾರ್ವಜನಿಕರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

ಆದರೆ ದಾರಿಮಧ್ಯೆಯೇ ಇಸ್ಮಾಯಿಲ್ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿರುವ ಸಂಚಾರ ಪೂರ್ವ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು