12:24 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

Mangaluru | ಕದ್ರಿ ಶಿವಭಾಗ್ ಬೃಹತ್ ತಡೆಗೋಡೆ ಕುಸಿತ: ಶಾಸಕ ವೇದವ್ಯಾಸ ಕಾಮತ್ ಭೇಟಿp

18/06/2025, 10:38

ಮಂಗಳೂರು(reporterkarnataka.com): ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ತೀವ್ರ ಮಳೆಯಿಂದ ತಡೆಗೋಡೆ ಇದ್ದ ಭಾಗದ ಗುಡ್ಡವೇ ಕುಸಿದಿದ್ದು, ಆ ರಭಸಕ್ಕೆ ಅಪಾರ್ಟ್ಮೆಂಟಿನ ಎರಡು ಮನೆಗಳು ಹಾನಿಗೀಡಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಣ್ಣು ಕುಸಿದ ನಂತರ ಇದೀಗ ಅಲ್ಲಿನ ಮರಗಳೂ ಸಹ ಅಪಾಯಕಾರಿ ಸ್ಥಿತಿಯಲ್ಲಿದ್ದು ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಪ್ರಾಕೃತಿಕ ವಿಕೋಪದಿಂದ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾದಾಗ ಹಿಂದಿನ ಬಿಜೆಪಿ ಸರ್ಕಾರ ಗರಿಷ್ಟ 5 ಲಕ್ಷದವರೆಗೂ ಪರಿಹಾರ ನೀಡುತ್ತಿತ್ತು. ಅಲ್ಲದೇ 35 ಕೋಟಿ ವಿಶೇಷ ಅನುದಾನದ ಮೂಲಕ ಕುಸಿದ ತಡೆಗೋಡೆಗಳ ಸಹಿತ ಕ್ಷೇತ್ರದ ಅನೇಕ ದುರಸ್ತಿ ಕಾರ್ಯ ನಡೆಸಲಾಗಿತ್ತು. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಆ ಎಲ್ಲಾ ಪರಿಹಾರ ಧನಕ್ಕೂ ಕತ್ತರಿ ಹಾಕಿರುವುದರಿಂದ ಇಲ್ಲಿನ ಜನತೆ ತೀವ್ರ ಸಮಸ್ಯೆ ಅನುಭವಿಸುವಂತಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ ಸಂತ್ರಸ್ತರ ನೆರವಿಗೆ ಧಾವಿಸಬೇಕೆಂದು ಶಾಸಕರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಕಾವ್ಯ ನಟರಾಜ್ ಆಳ್ವ, ಬಿಜೆಪಿ ಪ್ರಮುಖರಾದ ನವೀನ್ ಶೆಣೈ, ಪದ್ಮನಾಭ ನಾಯಕ್, ಯೋಗೀಶ್ ಶೆಣೈ, ಕಿರಣ್ ರೈ, ಅಪಾರ್ಟ್ಮೆಂಟಿನ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು