8:36 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ

16/01/2024, 17:23

ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್ ಆಚಾರ್ಯ ಅವರ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಖೈದಿಗಳ ಮನ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಾಗೃಹದ ಅಧೀಕ್ಷಕರಾದ ಓಬಳೇಶಪ್ಪ ಅವರು ವಹಿಸಿದರು. ವಿಚಾರಣಾಧೀನ ಖೈದಿಗಳ ಮನದಲ್ಲಿ ಪರಿವರ್ತನೆ ತಂದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇದೊಂದು ಅಪೂರ್ವ ಕಾರ್ಯಕ್ರಮ ಎಂದು ಓಬಳೇಶಪ್ಪ ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವಿನ ಬಗ್ಗೆ ವಿವರಿಸಿದರು.
ಕೆನರಾ ಹೈಸ್ಕೂಲ್ ಮತ್ತು ಸಂತ ಅಲೋಷಿಯಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿ ವಿಚಾರಣಾಧೀನ ಖೈದಿಗಳಲ್ಲಿ ಜಾಗೃತಿ ಮೂಡಿಸಿದರು.
ಹಬ್ಬದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖೈದಿಗಳೂ ಚಪ್ಪಾಳೆ ತಟ್ಟಿ, ಹಾಡಿಗೆ ದನಿಗೂಡಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು