6:07 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ

16/01/2024, 17:23

ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್ ಆಚಾರ್ಯ ಅವರ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಖೈದಿಗಳ ಮನ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಾಗೃಹದ ಅಧೀಕ್ಷಕರಾದ ಓಬಳೇಶಪ್ಪ ಅವರು ವಹಿಸಿದರು. ವಿಚಾರಣಾಧೀನ ಖೈದಿಗಳ ಮನದಲ್ಲಿ ಪರಿವರ್ತನೆ ತಂದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇದೊಂದು ಅಪೂರ್ವ ಕಾರ್ಯಕ್ರಮ ಎಂದು ಓಬಳೇಶಪ್ಪ ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವಿನ ಬಗ್ಗೆ ವಿವರಿಸಿದರು.
ಕೆನರಾ ಹೈಸ್ಕೂಲ್ ಮತ್ತು ಸಂತ ಅಲೋಷಿಯಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿ ವಿಚಾರಣಾಧೀನ ಖೈದಿಗಳಲ್ಲಿ ಜಾಗೃತಿ ಮೂಡಿಸಿದರು.
ಹಬ್ಬದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖೈದಿಗಳೂ ಚಪ್ಪಾಳೆ ತಟ್ಟಿ, ಹಾಡಿಗೆ ದನಿಗೂಡಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು