ಇತ್ತೀಚಿನ ಸುದ್ದಿ
ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ
03/04/2022, 10:08

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಕೆಎಸ್ಆರ್ಪಿ 7ಮೇ ಪಡೆ ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಶನಿವಾರ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು.
ನಿವೃತ್ತ ಉಪ ಪೊಲೀಸ್ ಆಯುಕ್ತ ವಿನಯ್ ಎ. ಗಾಂವಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿದರು.
ಮಂಗಳೂರಿ ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋರಿ ರೇ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡಿದ್ದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣಿ ಋಷಿಕೇಶ್ ಭಗವಾನ್,ಪುತ್ತೂರು ಡಿವೈಎಸ್ಪಿ ಡಾ.ಗಾನ.ಪಿ.ಕುಮಾರ್ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಕೆಎಸ್ಆರ್ಪಿ 7ನೇ ಪಡೆ ಕಮಾಂಡೆಂಟ್ ಬಿ.ಎಂ.ಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ 2020-21ರಲ್ಲಿ ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಸನ್ಮಾನಿಸಲಾಯಿತು.