2:29 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಳೆಯಿಂದ ಆರಂಭ: ಷರತ್ತು ಅನ್ವಯ

18/07/2021, 20:47

ಮಂಗಳೂರು(reporterkarnataka news): ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಷರತ್ತಿನ ಮೇಲೆ ಜುಲೈ 19ರಿಂದ ಅನುಮತಿ ನೀಡಲಾಗಿದೆ.

ಪ್ರಸ್ತುತ ರಾಜ್ಯ ಸರಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಪ್ರತಿದಿನ ಸಂಚಾರ ಮಾಡುವವರ ಅನುಕೂಲಕ್ಕಾಗಿ ಈ ಅನುಮತಿ ನೀಡಲಾಗಿದೆ  ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏನೆಲ್ಲ ಷರತ್ತು?

* ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ

ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು,

* ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು