3:33 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಮಂಗಳೂರು: ಕೆಲವೇ ತಾಸುಗಳಲ್ಲಿ ನಡೆಯಲಿರುವ ಪ್ರಧಾನಿ ರೋಡ್‌ ಶೋಗೆ ಅಂತಿಮ ಸಿದ್ದತೆ ಪೂರ್ಣ; ಕಡಲನಗರಿಯತ್ತ ಕೇಸರಿ ಪಡೆ

14/04/2024, 18:59

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಕೆಲವೇ ತಾಸುಗಳಲ್ಲಿ ನಡೆಸಲಿರುವ ರೋಡ್ ಶೋಗೆ ಅಂತಿಮ ಸಿದ್ಧತೆ ನಡೆದಿದ್ದು, ಕೇಸರಿ ಪಡೆ ಕಡಲನಗರಿಯತ್ತ ಸಾಗುತ್ತಿದೆ.


ರೋಡ್ ಶೋ ಆರಂಭವಾಗಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಕೊನೆಗೊಳ್ಳಲಿರುವ ನವಭಾರತ ಸರ್ಕಲ್ ವರೆಗೆ ಎಲ್ಲ ರೀತಿಯ ಅಂತಿಮ ಸಿದ್ಧತೆ ಪೂರ್ಣಗೊಂಡಿದೆ. ರಸ್ತೆಯ ಇಕ್ಕಡೆಗಳಲ್ಲಿ ಜನಸಮೂಹ ಸೇರಲಾರಂಭಿಸಿದೆ.
ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸುವರು.
ತೆರೆದ ವಾಹನದಲ್ಲಿ ಮೋದಿ ಅವರು ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸುವರು.

ಇತ್ತೀಚಿನ ಸುದ್ದಿ

ಜಾಹೀರಾತು