12:36 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಮಂಗಳೂರು: ಕೆಲವೇ ತಾಸುಗಳಲ್ಲಿ ನಡೆಯಲಿರುವ ಪ್ರಧಾನಿ ರೋಡ್‌ ಶೋಗೆ ಅಂತಿಮ ಸಿದ್ದತೆ ಪೂರ್ಣ; ಕಡಲನಗರಿಯತ್ತ ಕೇಸರಿ ಪಡೆ

14/04/2024, 18:59

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಕೆಲವೇ ತಾಸುಗಳಲ್ಲಿ ನಡೆಸಲಿರುವ ರೋಡ್ ಶೋಗೆ ಅಂತಿಮ ಸಿದ್ಧತೆ ನಡೆದಿದ್ದು, ಕೇಸರಿ ಪಡೆ ಕಡಲನಗರಿಯತ್ತ ಸಾಗುತ್ತಿದೆ.


ರೋಡ್ ಶೋ ಆರಂಭವಾಗಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಕೊನೆಗೊಳ್ಳಲಿರುವ ನವಭಾರತ ಸರ್ಕಲ್ ವರೆಗೆ ಎಲ್ಲ ರೀತಿಯ ಅಂತಿಮ ಸಿದ್ಧತೆ ಪೂರ್ಣಗೊಂಡಿದೆ. ರಸ್ತೆಯ ಇಕ್ಕಡೆಗಳಲ್ಲಿ ಜನಸಮೂಹ ಸೇರಲಾರಂಭಿಸಿದೆ.
ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸುವರು.
ತೆರೆದ ವಾಹನದಲ್ಲಿ ಮೋದಿ ಅವರು ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸುವರು.

ಇತ್ತೀಚಿನ ಸುದ್ದಿ

ಜಾಹೀರಾತು