5:07 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಮಂಗಳೂರು: ಕುಸಿತದ ಭೀತಿಯಲ್ಲಿ ಕೊಡಕ್ಕಲ್‌ ಗುಡ್ಡ ಪ್ರದೇಶ; ಆತಂಕದಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು

11/09/2024, 17:49

ಮಂಗಳೂರು(reporterkarnataka.com): ಪ್ರಸಕ್ತ ಮುಂಗಾರಿನಲ್ಲಿ ಸಾಕಷ್ಟು ಭೂಕುಸಿತ ಸಂಭವಿಸಿದ್ದು, ಸಾಕಷ್ಟು ಸಾವು- ನೋವು ಘಟಿಸಿವೆ. ಇದೀಗ ಅಂತದ್ದೊಂದು ಅಪಾಯದ ಭೀತಿ ಮಂಗಳೂರಿನಲ್ಲೇ ಎದುರಾಗಿದೆ. ನಗರದ ಹೊರವಲಯದ ಪಡೀಲ್ ಸಮೀಪದ ಕೊಡಕ್ಕಲ್‌ ಎಂಬಲ್ಲಿ ಗುಡ್ಡಕುಸಿತದ ಭೀತಿ ಎದುರಾಗಿ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.


ಮಂಗಳೂರಿನ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಮೀಪದ ಕೊಡಕ್ಕಲ್‌ ಪ್ರದೇಶ ಇದೆ. ಇಲ್ಲಿ ಗುಡ್ಡ ಕುಸಿಯುವ ಆತಂಕದಲ್ಲಿದ್ದು, ಗುಡ್ಡದ ಮೇಲಿನ ನಿವಾಸಿಗಳು, ಕೆಳಗಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಪಡೀಲ್‌ನ ಕೊಡಕ್ಕಲ್‌ ಎಂಬ ಪ್ರದೇಶದ ಇದಾಗಿದ್ದು, ಗುಡ್ಡದ ಮೇಲೆ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಇನ್ನು ಗುಡ್ಡದ ಬುಡದಲ್ಲೇ ಅಂಗಡಿ, ಮಳಿಗೆಗಳು ಹಾಗೂ ಮನೆಗಳಿದ್ದು, ಇದೂ ಕೂಡಾ ಅಪಾಯಕ್ಕೆ ಸಿಲುಕಿವೆ. ಈಗಾಗಲೇ ಗುಡ್ಡ ಸ್ವಲ್ಪ ಕುಸಿತ ಉಂಟಾಗಿದ್ದು, ಗುಡ್ಡದ ಅಂಚಿನಲ್ಲಿರೋ ಟಾಯ್ಲೆಟ್‌ ಒಂದು ಆಗಲೋ ಈಗಲೋ ಅನ್ನೋ ಸ್ಥಿತಿಯಲ್ಲಿ ಇದೆ. ಒಮ್ಮೆ ಇಲ್ಲಿ ಗುಡ್ಡ ಕುಸಿತ ಉಂಟಾದ್ರೆ ಭಾರಿ ಪ್ರಮಾಣದ ಅನಾಹುತ ಉಂಟಾಗುವ ಸಾದ್ಯತೆ ಇದೆ. ಮಳೆ ಇನ್ನೂ ದೂರವಾಗಿಲ್ಲದ ಕಾರಣ ಗುಡ್ಡ ಕುಸಿತದ ಆತಂಕ ಕೂಡಾ ದೂರವಾಗಿಲ್ಲ. ಮಳೆಗಾಲವನ್ನು ಆತಂಕದಲ್ಲೇ ಕಳೆದಿದ್ದ ಇಲ್ಲಿನ ನಿವಾಸಿಗಳು ಇದೀಗ ಮಳೆಯ ಭಯ ಕಾಡಲು ಆರಂಭವಾಗಿದೆ. ಇಲ್ಲಿ ಬಹಳ ವರ್ಷಗಳ ಹಿಂದೆ ಅಗೆತ ಮಾಡಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಜಿಲ್ಲಾಡಳಿತವ ಎಚ್ಚೆತ್ತು ಯಾವುದೇ ಮುಂಜಾಗ್ರತ ಕ್ರಮವಿಲ್ಲದೆ ಅಕ್ರಮವಾಗಿ ಮಣ್ಣುತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು