2:05 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

Mangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ

27/11/2025, 19:24

ಮಂಗಳೂರು(reporterkarnataka.com): ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಬಹುನಿರೀಕ್ಷಿತ ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನವೆಂಬರ್ 28ರಂದು ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ತೆರೆಕಾಣಲಿದೆ. ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳನ್ನು ಯಶಸ್ವಿಯಾಗಿ ಮುಗಿಸಿದ್ದು ಪ್ರೇಕ್ಷಕರಿಂದ ಹಾಗೂ ಸಿನೆಮಾ ವಿಶ್ಲೇಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದೆ. ಯುವ ಸಾಹಿತಿ, ಪತ್ರಕರ್ತ ಸ್ಟ್ಯಾನಿ ಬೇಳ ಬಾಪಾಚೆ ಪುತಾಚೆ ನಾಂವಿಂ ಚಿತ್ರಕ್ಕೆ ಕಥೆ , ಸಂಭಾಷಣೆ ಬರೆದು, ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಂಜಯ್ ರಾಡ್ರಿಗಸ್ ಹಿನ್ನಲೆ ಸಂಗೀತವಿದೆ. ಯುವ ಛಾಯಾಗ್ರಾಹಕ ಜೋಯಲ್ ಶಮನ್ ಕ್ಯಾಮೆರಾ ಚಲಾಯಿಸಿದ್ದಾರೆ. ಉಡುಪಿ, ಪುತ್ತೂರು ಹಾಗೂ ದೇರಳಕಟ್ಟೆಯಲ್ಲಿ ಡಿಸೆಂಬರ್ 5ರಂದು ಚಿತ್ರವು ತೆರೆಕಾಣಲಿದೆ ಎಂದು ನಿರ್ಮಾಣ ಸಂಸ್ಥೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು