2:51 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಕೊರಗಜ್ಜ ಕಟ್ಟೆಯಲ್ಲಿ ಕಾಂಡೋಮ್ ಇರಿಸಿದ ಆರೋಪಿ ಬಂಧನ; ಊಹಾಪೋಹಗಳಿಗೆ ತೆರೆ

30/12/2021, 09:55

ಮಂಗಳೂರು(reporterkarnataka.com): ನಗರದ ಅತ್ತಾವರ ಬಳಿಯ ಕೊರಗಜ್ಜ ಕಟ್ಟೆಯಲ್ಲಿ ಉಪಯೋಗಿಸಿದ ಕಾಂಡೋಮ್ ಇರಿಸಿ ಅಪವಿತ್ರಗೊಳಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಹುಬ್ಬಳ್ಳಿ ಯವನಾದ ಪ್ರಸ್ತುತ ಕೋಟೆಕಾರು ಮುಂಡಾಣ ಎಂಬಲ್ಲಿ ವಾಸವಾಗಿರುವ ದೇವದಾಸ್ ದೇಸಾಯಿ (62) ಬಂಧಿತ ಆರೋಪಿ. ಈತನ ತಂದೆ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದು, ವಿವಿಧ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಗುರುದ್ವಾರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತಾದ ಲೇಖನ ಹಾಕಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ,ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ, ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಫು ನಾಗನ ಕಟ್ಟೆ , ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ , ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ, ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು, ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್, ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು ಮುಂತಾದ ಕಡೆ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು