9:37 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂಗಳೂರು: ಕೊರಗಜ್ಜ ಕಟ್ಟೆಯಲ್ಲಿ ಕಾಂಡೋಮ್ ಇರಿಸಿದ ಆರೋಪಿ ಬಂಧನ; ಊಹಾಪೋಹಗಳಿಗೆ ತೆರೆ

30/12/2021, 09:55

ಮಂಗಳೂರು(reporterkarnataka.com): ನಗರದ ಅತ್ತಾವರ ಬಳಿಯ ಕೊರಗಜ್ಜ ಕಟ್ಟೆಯಲ್ಲಿ ಉಪಯೋಗಿಸಿದ ಕಾಂಡೋಮ್ ಇರಿಸಿ ಅಪವಿತ್ರಗೊಳಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಹುಬ್ಬಳ್ಳಿ ಯವನಾದ ಪ್ರಸ್ತುತ ಕೋಟೆಕಾರು ಮುಂಡಾಣ ಎಂಬಲ್ಲಿ ವಾಸವಾಗಿರುವ ದೇವದಾಸ್ ದೇಸಾಯಿ (62) ಬಂಧಿತ ಆರೋಪಿ. ಈತನ ತಂದೆ ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದು, ವಿವಿಧ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಗುರುದ್ವಾರಗಳ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತಾದ ಲೇಖನ ಹಾಕಿರುವುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ,ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ, ಕೊಂಡಾಣ ದೈವಸ್ಥಾನ, ಮಂಗಳಾದೇವಿ ದೇವಸ್ಥಾನ, ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ, ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ, ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ, ಕಲ್ಲಾಫು ನಾಗನ ಕಟ್ಟೆ , ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ, ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ, ಕುತ್ತಾರು ಕೊರಗಜ್ಜನ ಕಟ್ಟೆ, ಕುಡುಪು ದೈವಸ್ಥಾನ , ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ, ನಂದಿಗುಡ್ಡೆಯ ಕೊರಗಜ್ಜನ ಗುಡಿ, ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ, ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು, ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್, ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು ಮುಂತಾದ ಕಡೆ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು