3:13 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮಂಗಳೂರು: ಕೆಪಿಟಿ ಸಮಸ್ಯೆ ಕುರಿತು ಚರ್ಚಿಸಲು ಹೋದ ಎಬಿವಿಪಿ ಮುಖಂಡರಿಗೆ ನಿಂದನೆ: ಪ್ರತಿಭಟನೆ

05/12/2022, 23:48

ಮಂಗಳೂರು(reporterkarnataka.com): ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿಯಲ್ಲಿ ನಡೆದಿದೆ.

ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಬಾಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಕೆಪಿಟಿ ಪ್ರಾಂಶುಪಾಲರ ನಡೆಯಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಮದ್ಯಾಹ್ನದಿಂದ ವಿದ್ಯಾರ್ಥಿಗಳು ಕಾಲೇಜಿನ ಹೊರಗಡೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳ ಸಮಸ್ಯೆಯ ಕುರಿತಾಗಿ ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ಬಳಿ ಚರ್ಚಿಸಲು ವಿದ್ಯಾರ್ಥಿ ಪರಿಷತ್ ನ ಪ್ರಮುಖ ಕಾರ್ಯಕರ್ತರು ತೆರಳಿದಾಗ ವಿದ್ಯಾರ್ಥಿಗಳನ್ನು ನಿಂದಿಸಿ, ಪರಿಷತ್ ನ ಕಾರ್ಯಕರ್ತರಿಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಹೊಡೆಸುವುದಾಗಿ ಹೇಳಿದಾಗ ಕೆರಳಿದ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಕಾಲೇಜಿನ ಮುಂಬಾಗದಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದರು.

ಮಧ್ಯಾಹ್ನದಿಂದ ನಡೆಯುತ್ತಿರುವ ಪ್ರತಿಭಟನೆಗೆ ಪ್ರಾಂಶುಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎಬಿವಿಪಿ ನಾಯಕರು ಹೇಳಿದ್ದು ಪ್ರತಿಭಟನಾ ಸ್ಥಳಕ್ಕೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆಗೆ ಕ್ಷಮೆಯಾಚಿಸ ಬೇಕಾಗಿ ಆಗ್ರಹಿಸಿದ್ದಾರೆ. ಪ್ರತಿಭಟನೆಯ ನೇತೃತ್ವವನ್ನು
ವಿಭಾಗ ಸಂಚಾಲಕರಾದ ಹರ್ಷಿತ್ ಕೊಯ್ಲಿ, ಜಿಲ್ಲಾ ಸಂಚಾಲಕ್ ಶ್ರೇಯಸ್ ವಿಭಾಗ ಎಸ್ ಎಫ್ ಡಿ ಪ್ರಮುಖ್ ನಿಶಾನ್ ಆಳ್ವ ಪ್ರಮುಖರಾದ ಸ್ಕಂದ ಕಿರಣ್, ಶ್ರೀಪಾದ್ ವಹಿಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಾಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು