11:41 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

Mangaluru | ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್

18/12/2025, 11:28

ಮಂಗಳೂರು(reporterkarnataka.com): ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್‌.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್‌ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 13 ಮತ್ತು 14ರಂದು ಅತ್ಯಂತ ಯಶಸ್ವಿಯಾಗಿ ನಡೆಯಿತು.
ಈ ಪಂದ್ಯಾಟದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ವಿವಿಧ ಚರ್ಚ್‌ಗಳಿಂದ ಒಟ್ಟು 19 ತಂಡಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಕ್ರಿಕೆಟ್ ತಂಡವು ಕುಡ್ಲ ಟ್ರೋಫಿಯನ್ನು ತನ್ನದಾಗಿಸಿಕೊಂಡು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಟೀಂ ಪಾಲಡ್ಕಾ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.



ಪಂದ್ಯಗಳನ್ನು ನ್ಯಾಯಸಮ್ಮತವಾಗಿ ನಡೆಸುವಲ್ಲಿ ಅಂಪೈರ್‌ಗಳು ಆಗಿ ರಾಜೇಶ್ ಪಡಿಲ್, ಸೈಫ್ ಬಜಾಲ್, ರಂಜೇಶ್ ಉಚಿಲ್, ಆರಿಫ್ ಜೋಕಟ್ಟೆ ಹಾಗೂ ಅಶ್ವತ್ ಕುಂಪಲ ಅವರು ನಿಷ್ಠೆಯಿಂದ ಹಾಗೂ ನಿಯಮಾನುಸಾರವಾಗಿ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದರು.
ಪಂದ್ಯದ ಪ್ರತಿಯೊಂದು ಹಂತವನ್ನೂ ರೋಚಕವಾಗಿಸುವಂತೆ ರಾಜೇಶ್ ಪೆರೇರಾ ಹಾಗೂ ಸಯ್ಯಾದ್ ಗುರುಕಂಬಳ ಅವರು ಮನಮೋಹಕ ಹಾಗೂ ವಿವರವಾದ ಕಾಮೆಂಟ್ರಿ ನೀಡಿದರು. ಆಟಗಾರರು, ಆಯೋಜಕರು ಹಾಗೂ ಪ್ರೇಕ್ಷಕರ ಉತ್ತಮ ಸಹಕಾರದಿಂದ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಹಾಗೂ ಸಾರ್ಥಕವಾಗಿ ಸಂಪನ್ನವಾಯಿತು. ಕ್ರೀಡಾಭಿಮಾನಿಗಳಿಗೆ ಅನೇಕ ರೋಚಕ ಕ್ಷಣಗಳನ್ನು ನೀಡಿದ ಈ ಪಂದ್ಯಾಟವು ರೋಹನ್ ವಾಮಂಜೂರು, ಸೋಹನ್, ರೊಲ್ವಿನ್, ಮಧು, ಪ್ರಜ್ನಾ ಹಾಗೂ ಸ್ವೀಟಿ ಅವರ ಸಮರ್ಥ ಮುಂದಾಳತ್ವ ಮತ್ತು ಉತ್ತಮ ವ್ಯವಸ್ಥೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು