ಇತ್ತೀಚಿನ ಸುದ್ದಿ
Mangaluru | ಕುದ್ರೋಳಿ ತೀರ್ಥಾಟನೆ: ನಾಳೆ ಪೂರ್ವಭಾವಿ ಸಭೆ; ಪೋಸ್ಟರ್ ಬಿಡುಗಡೆ
23/01/2026, 20:29
ಮಂಗಳೂರು(reporterkarnataka.com): ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅರ್ಧವಾರ್ಷಿಕ ಸಭೆ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಫೆ.21ರಂದು ಜರಗುವ ಕುದ್ರೋಳಿ ತೀರ್ಥಾಟನೆಯ ಪೂರ್ವಭಾವಿ ಸಭೆ ಜ.24ರಂದು ಬೆಳಗ್ಗೆ 10.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ತೀರ್ಥಾಟನೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ, ಕಾರ್ಯಕ್ರಮದ ಪೂರ್ವ ತಯಾರಿ ಸಂಬಂಧಪಟ್ಟಂತೆ ಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಮತ್ತು ಬಿಲ್ಲವರ ಮಹಾಮಂಡಲ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ತಿಳಿಸಿದ್ದಾರೆ.














