4:21 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ಕುಂಟಿಕಾನ ಬಳಿ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಸ್ಕೂಟರ್ ಸವಾರ ದಾರುಣ ಸಾವು

12/10/2023, 12:17

ಮಂಗಳೂರು(reporterkarnataka.com): ನಗರದ ಕುಂಟಿಕಾನ ಎ. ಜೆ. ಆಸ್ಪತ್ರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕುಂಟಿಕಾನದ ಕೆನರಾ ಬ್ಯಾಂಕಿನ ಎಟಿಎಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಎ ಜೆ ಆಸ್ಪತ್ರೆ ಬಳಿಯ ಹೋಟೆಲ್ ಹೈವೆ ಎದುರುಗಡೆ ಬಾರೆಬೈಲ್ ಕ್ರಾಸ್ ಕಡೆಯಿಂದ ಎ ಜೆ ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಎಲೆಕ್ಟ್ರಿಕಲ್ ಆಟೋರಿಕ್ಷಾ
ಸಾಗುತ್ತಿದ್ದ ವೇಳೆ ಎ. ಜೆ. ಆಸ್ಪತ್ರೆ ಎದುರುಗಡೆಯ ಕೆನರಾ ಬ್ಯಾಂಕ್ ಎಟಿಎಮ್ ಬಳಿ ರಸ್ತೆಗೆ ಬಂದು ತಲುಪಿದ ವೇಳೆ ಆಟೋ ರಿಕ್ಷಾದ ಹಿಂದುಗಡೆಯಿಂದ ಬಾರೆಬೈಲ್ ಕ್ರಾಸ್ ಕಡೆಯಿಂದ ಎ.ಜೆ. ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಆಟೋ ರಿಕ್ಷಾದ ಹಿಂದುಗಡೆಗೆ ತಾಗಿ ಸ್ಕೂಟರ್ ಸಮೇತ ಸವಾರ ಕೌಶಿಕ್ ಎಂಬವರು ಡಾಮಾರು ರಸ್ತೆಯ ಬಲ ಬದಿಗೆ ಬಿದ್ದರು. ಈ ವೇಳೆ ಕುಂಟಿಕಾನ ಕಡೆಯಿಂದ ಎ. ಜೆ. ಆಸ್ಪತ್ರೆಯ ಎದುರುಗಡೆಯಾಗಿ ಬಾರೆಬೈಲ್ ಕ್ರಾಸ್ ಕಡೆಗೆ ಸಾಗಿರುವ ಸರ್ವಿಸ್ ರಸ್ತೆಯಲ್ಲಿ
KA-19-MD-7779 ನೊಂದಣಿ ನಂಬ್ರದ ಕಾರನ್ನು ಕೆ ರಮೇಶ ಎಂಬುವರು ಅಜಾಗರುಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯ ಮೇಲೆ ಬಿದ್ದಿದ್ದ ಸ್ಕೂಟರ್ ಸವಾರನ ತಲೆಯ ಭಾಗದ ಮೇಲೆ ಕಾರಿನ ಚಕ್ರವನ್ನು ಚಾಲಯಿಸಿಕೊಂಡು ಹೋದ ಪರಿಣಾಮ ಕೌಶಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರ ಸಹಾಯದಿಂದ ಗಾಯಾಳುವನ್ನು ತಕ್ಷಣ
ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಆತನನ್ನು ಅಪಘಾತ ಸ್ಥಳದಿಂದ ಕರೆತರುವ ವೇಳೆ ಗಾಯಾಳು ಮೃತ ಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು