8:12 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಂಗಳೂರು ಕುಂಟಿಕಾನ ಬಳಿ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಸ್ಕೂಟರ್ ಸವಾರ ದಾರುಣ ಸಾವು

12/10/2023, 12:17

ಮಂಗಳೂರು(reporterkarnataka.com): ನಗರದ ಕುಂಟಿಕಾನ ಎ. ಜೆ. ಆಸ್ಪತ್ರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕುಂಟಿಕಾನದ ಕೆನರಾ ಬ್ಯಾಂಕಿನ ಎಟಿಎಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಎ ಜೆ ಆಸ್ಪತ್ರೆ ಬಳಿಯ ಹೋಟೆಲ್ ಹೈವೆ ಎದುರುಗಡೆ ಬಾರೆಬೈಲ್ ಕ್ರಾಸ್ ಕಡೆಯಿಂದ ಎ ಜೆ ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಎಲೆಕ್ಟ್ರಿಕಲ್ ಆಟೋರಿಕ್ಷಾ
ಸಾಗುತ್ತಿದ್ದ ವೇಳೆ ಎ. ಜೆ. ಆಸ್ಪತ್ರೆ ಎದುರುಗಡೆಯ ಕೆನರಾ ಬ್ಯಾಂಕ್ ಎಟಿಎಮ್ ಬಳಿ ರಸ್ತೆಗೆ ಬಂದು ತಲುಪಿದ ವೇಳೆ ಆಟೋ ರಿಕ್ಷಾದ ಹಿಂದುಗಡೆಯಿಂದ ಬಾರೆಬೈಲ್ ಕ್ರಾಸ್ ಕಡೆಯಿಂದ ಎ.ಜೆ. ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಆಟೋ ರಿಕ್ಷಾದ ಹಿಂದುಗಡೆಗೆ ತಾಗಿ ಸ್ಕೂಟರ್ ಸಮೇತ ಸವಾರ ಕೌಶಿಕ್ ಎಂಬವರು ಡಾಮಾರು ರಸ್ತೆಯ ಬಲ ಬದಿಗೆ ಬಿದ್ದರು. ಈ ವೇಳೆ ಕುಂಟಿಕಾನ ಕಡೆಯಿಂದ ಎ. ಜೆ. ಆಸ್ಪತ್ರೆಯ ಎದುರುಗಡೆಯಾಗಿ ಬಾರೆಬೈಲ್ ಕ್ರಾಸ್ ಕಡೆಗೆ ಸಾಗಿರುವ ಸರ್ವಿಸ್ ರಸ್ತೆಯಲ್ಲಿ
KA-19-MD-7779 ನೊಂದಣಿ ನಂಬ್ರದ ಕಾರನ್ನು ಕೆ ರಮೇಶ ಎಂಬುವರು ಅಜಾಗರುಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯ ಮೇಲೆ ಬಿದ್ದಿದ್ದ ಸ್ಕೂಟರ್ ಸವಾರನ ತಲೆಯ ಭಾಗದ ಮೇಲೆ ಕಾರಿನ ಚಕ್ರವನ್ನು ಚಾಲಯಿಸಿಕೊಂಡು ಹೋದ ಪರಿಣಾಮ ಕೌಶಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರ ಸಹಾಯದಿಂದ ಗಾಯಾಳುವನ್ನು ತಕ್ಷಣ
ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಆತನನ್ನು ಅಪಘಾತ ಸ್ಥಳದಿಂದ ಕರೆತರುವ ವೇಳೆ ಗಾಯಾಳು ಮೃತ ಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು