8:31 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಗಳೂರು ಕುಂಟಿಕಾನ ಬಳಿ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಸ್ಕೂಟರ್ ಸವಾರ ದಾರುಣ ಸಾವು

12/10/2023, 12:17

ಮಂಗಳೂರು(reporterkarnataka.com): ನಗರದ ಕುಂಟಿಕಾನ ಎ. ಜೆ. ಆಸ್ಪತ್ರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕುಂಟಿಕಾನದ ಕೆನರಾ ಬ್ಯಾಂಕಿನ ಎಟಿಎಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಎ ಜೆ ಆಸ್ಪತ್ರೆ ಬಳಿಯ ಹೋಟೆಲ್ ಹೈವೆ ಎದುರುಗಡೆ ಬಾರೆಬೈಲ್ ಕ್ರಾಸ್ ಕಡೆಯಿಂದ ಎ ಜೆ ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಎಲೆಕ್ಟ್ರಿಕಲ್ ಆಟೋರಿಕ್ಷಾ
ಸಾಗುತ್ತಿದ್ದ ವೇಳೆ ಎ. ಜೆ. ಆಸ್ಪತ್ರೆ ಎದುರುಗಡೆಯ ಕೆನರಾ ಬ್ಯಾಂಕ್ ಎಟಿಎಮ್ ಬಳಿ ರಸ್ತೆಗೆ ಬಂದು ತಲುಪಿದ ವೇಳೆ ಆಟೋ ರಿಕ್ಷಾದ ಹಿಂದುಗಡೆಯಿಂದ ಬಾರೆಬೈಲ್ ಕ್ರಾಸ್ ಕಡೆಯಿಂದ ಎ.ಜೆ. ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಆಟೋ ರಿಕ್ಷಾದ ಹಿಂದುಗಡೆಗೆ ತಾಗಿ ಸ್ಕೂಟರ್ ಸಮೇತ ಸವಾರ ಕೌಶಿಕ್ ಎಂಬವರು ಡಾಮಾರು ರಸ್ತೆಯ ಬಲ ಬದಿಗೆ ಬಿದ್ದರು. ಈ ವೇಳೆ ಕುಂಟಿಕಾನ ಕಡೆಯಿಂದ ಎ. ಜೆ. ಆಸ್ಪತ್ರೆಯ ಎದುರುಗಡೆಯಾಗಿ ಬಾರೆಬೈಲ್ ಕ್ರಾಸ್ ಕಡೆಗೆ ಸಾಗಿರುವ ಸರ್ವಿಸ್ ರಸ್ತೆಯಲ್ಲಿ
KA-19-MD-7779 ನೊಂದಣಿ ನಂಬ್ರದ ಕಾರನ್ನು ಕೆ ರಮೇಶ ಎಂಬುವರು ಅಜಾಗರುಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯ ಮೇಲೆ ಬಿದ್ದಿದ್ದ ಸ್ಕೂಟರ್ ಸವಾರನ ತಲೆಯ ಭಾಗದ ಮೇಲೆ ಕಾರಿನ ಚಕ್ರವನ್ನು ಚಾಲಯಿಸಿಕೊಂಡು ಹೋದ ಪರಿಣಾಮ ಕೌಶಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರ ಸಹಾಯದಿಂದ ಗಾಯಾಳುವನ್ನು ತಕ್ಷಣ
ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಆತನನ್ನು ಅಪಘಾತ ಸ್ಥಳದಿಂದ ಕರೆತರುವ ವೇಳೆ ಗಾಯಾಳು ಮೃತ ಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು