11:08 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರು ಕುಂಟಿಕಾನ ಬಳಿ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಸ್ಕೂಟರ್ ಸವಾರ ದಾರುಣ ಸಾವು

12/10/2023, 12:17

ಮಂಗಳೂರು(reporterkarnataka.com): ನಗರದ ಕುಂಟಿಕಾನ ಎ. ಜೆ. ಆಸ್ಪತ್ರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕುಂಟಿಕಾನದ ಕೆನರಾ ಬ್ಯಾಂಕಿನ ಎಟಿಎಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಎ ಜೆ ಆಸ್ಪತ್ರೆ ಬಳಿಯ ಹೋಟೆಲ್ ಹೈವೆ ಎದುರುಗಡೆ ಬಾರೆಬೈಲ್ ಕ್ರಾಸ್ ಕಡೆಯಿಂದ ಎ ಜೆ ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಎಲೆಕ್ಟ್ರಿಕಲ್ ಆಟೋರಿಕ್ಷಾ
ಸಾಗುತ್ತಿದ್ದ ವೇಳೆ ಎ. ಜೆ. ಆಸ್ಪತ್ರೆ ಎದುರುಗಡೆಯ ಕೆನರಾ ಬ್ಯಾಂಕ್ ಎಟಿಎಮ್ ಬಳಿ ರಸ್ತೆಗೆ ಬಂದು ತಲುಪಿದ ವೇಳೆ ಆಟೋ ರಿಕ್ಷಾದ ಹಿಂದುಗಡೆಯಿಂದ ಬಾರೆಬೈಲ್ ಕ್ರಾಸ್ ಕಡೆಯಿಂದ ಎ.ಜೆ. ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಆಟೋ ರಿಕ್ಷಾದ ಹಿಂದುಗಡೆಗೆ ತಾಗಿ ಸ್ಕೂಟರ್ ಸಮೇತ ಸವಾರ ಕೌಶಿಕ್ ಎಂಬವರು ಡಾಮಾರು ರಸ್ತೆಯ ಬಲ ಬದಿಗೆ ಬಿದ್ದರು. ಈ ವೇಳೆ ಕುಂಟಿಕಾನ ಕಡೆಯಿಂದ ಎ. ಜೆ. ಆಸ್ಪತ್ರೆಯ ಎದುರುಗಡೆಯಾಗಿ ಬಾರೆಬೈಲ್ ಕ್ರಾಸ್ ಕಡೆಗೆ ಸಾಗಿರುವ ಸರ್ವಿಸ್ ರಸ್ತೆಯಲ್ಲಿ
KA-19-MD-7779 ನೊಂದಣಿ ನಂಬ್ರದ ಕಾರನ್ನು ಕೆ ರಮೇಶ ಎಂಬುವರು ಅಜಾಗರುಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯ ಮೇಲೆ ಬಿದ್ದಿದ್ದ ಸ್ಕೂಟರ್ ಸವಾರನ ತಲೆಯ ಭಾಗದ ಮೇಲೆ ಕಾರಿನ ಚಕ್ರವನ್ನು ಚಾಲಯಿಸಿಕೊಂಡು ಹೋದ ಪರಿಣಾಮ ಕೌಶಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರ ಸಹಾಯದಿಂದ ಗಾಯಾಳುವನ್ನು ತಕ್ಷಣ
ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಆತನನ್ನು ಅಪಘಾತ ಸ್ಥಳದಿಂದ ಕರೆತರುವ ವೇಳೆ ಗಾಯಾಳು ಮೃತ ಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು