3:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ಮಂಗಳೂರು ಕುಂಟಿಕಾನ ಬಳಿ ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಸ್ಕೂಟರ್ ಸವಾರ ದಾರುಣ ಸಾವು

12/10/2023, 12:17

ಮಂಗಳೂರು(reporterkarnataka.com): ನಗರದ ಕುಂಟಿಕಾನ ಎ. ಜೆ. ಆಸ್ಪತ್ರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕುಂಟಿಕಾನದ ಕೆನರಾ ಬ್ಯಾಂಕಿನ ಎಟಿಎಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಎ ಜೆ ಆಸ್ಪತ್ರೆ ಬಳಿಯ ಹೋಟೆಲ್ ಹೈವೆ ಎದುರುಗಡೆ ಬಾರೆಬೈಲ್ ಕ್ರಾಸ್ ಕಡೆಯಿಂದ ಎ ಜೆ ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಎಲೆಕ್ಟ್ರಿಕಲ್ ಆಟೋರಿಕ್ಷಾ
ಸಾಗುತ್ತಿದ್ದ ವೇಳೆ ಎ. ಜೆ. ಆಸ್ಪತ್ರೆ ಎದುರುಗಡೆಯ ಕೆನರಾ ಬ್ಯಾಂಕ್ ಎಟಿಎಮ್ ಬಳಿ ರಸ್ತೆಗೆ ಬಂದು ತಲುಪಿದ ವೇಳೆ ಆಟೋ ರಿಕ್ಷಾದ ಹಿಂದುಗಡೆಯಿಂದ ಬಾರೆಬೈಲ್ ಕ್ರಾಸ್ ಕಡೆಯಿಂದ ಎ.ಜೆ. ಆಸ್ಪತ್ರೆ ಎದುರುಗಡೆಯಾಗಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಆಟೋ ರಿಕ್ಷಾದ ಹಿಂದುಗಡೆಗೆ ತಾಗಿ ಸ್ಕೂಟರ್ ಸಮೇತ ಸವಾರ ಕೌಶಿಕ್ ಎಂಬವರು ಡಾಮಾರು ರಸ್ತೆಯ ಬಲ ಬದಿಗೆ ಬಿದ್ದರು. ಈ ವೇಳೆ ಕುಂಟಿಕಾನ ಕಡೆಯಿಂದ ಎ. ಜೆ. ಆಸ್ಪತ್ರೆಯ ಎದುರುಗಡೆಯಾಗಿ ಬಾರೆಬೈಲ್ ಕ್ರಾಸ್ ಕಡೆಗೆ ಸಾಗಿರುವ ಸರ್ವಿಸ್ ರಸ್ತೆಯಲ್ಲಿ
KA-19-MD-7779 ನೊಂದಣಿ ನಂಬ್ರದ ಕಾರನ್ನು ಕೆ ರಮೇಶ ಎಂಬುವರು ಅಜಾಗರುಕತೆಯಿಂದ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯ ಮೇಲೆ ಬಿದ್ದಿದ್ದ ಸ್ಕೂಟರ್ ಸವಾರನ ತಲೆಯ ಭಾಗದ ಮೇಲೆ ಕಾರಿನ ಚಕ್ರವನ್ನು ಚಾಲಯಿಸಿಕೊಂಡು ಹೋದ ಪರಿಣಾಮ ಕೌಶಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರ ಸಹಾಯದಿಂದ ಗಾಯಾಳುವನ್ನು ತಕ್ಷಣ
ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಆತನನ್ನು ಅಪಘಾತ ಸ್ಥಳದಿಂದ ಕರೆತರುವ ವೇಳೆ ಗಾಯಾಳು ಮೃತ ಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು