10:17 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಮಂಗಳೂರು ಲೇಡಿಗೋಶನ್ ಆಸ್ಪತ್ರೆಯಲ್ಲಿ ‘ಲಕ್ಷ್ಯ ಸಂಭ್ರಮ – 2022’: ಗುಣಮಟ್ಟದ ಸೇವೆಗೆ ಮತ್ತೊಂದು ಗರಿ!

15/08/2022, 19:29

ಮಂಗಳೂರು(reporterkarnataka.com); ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಲಕ್ಷ್ಯ ಸಂಭ್ರಮ – 2022 ಆಚರಿಸಲಾಯಿತು.

ಹೆರಿಗೆ ಮತ್ತು ಸಂಬಂಧಿತ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಗುಣಮಟ್ಟದ ಸೇವೆಯನ್ನು ಮಹಿಳೆಯರಿಗೆ ನೀಡುತ್ತಾ ಬಂದಿರುವ ಸರಕಾರಿ ಲೇಡಿಗೋಶನ್ ಆಸ್ಪತ್ರೆ ರಾಷ್ಟ್ರೀಯ ಮಟ್ಟದಲ್ಲಿ ಲಕ್ಷ್ಯ ಪ್ರಮಾಣಪತ್ರವನ್ನು ಪಡೆದಿರುವ ಸವಿನೆನಪನ್ನು ಸಂಭ್ರಮಿಸಿ ಇನ್ನಷ್ಟು ಮೆರುಗುಗೊಳಿಸುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಪ್ರಜ್ವಲಿಸಿ ಮಾತನಾಡಿದ ನಿವಾಸಿ ವೈದ್ಯಾಧಿಕಾರಿಗಳಾದ 
ಡಾ. ಬಾಲಕೃಷ್ಣ ರಾವ್  ಅವರು ಲಕ್ಷ್ಯ ಕಾರ್ಯಕ್ರಮದ ಹಿನ್ನೆಲೆ ಉದ್ದೇಶಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಸಾಧನೆಯ ಹಾದಿಯ ಎಡರು ತೊಡರುಗಳ ಕುರಿತು ನೋವು ನಲಿವುಗಳನ್ನು ಹಂಚಿಕೊಂಡ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ. ಆರ್.  ಅವರು ಸರಕಾರಿ ಲೇಡಿಗೋಶನ್ ಆಸ್ಪತ್ರೆ ,ರಾಷ್ಟ್ರ ಮಟ್ಟದಲ್ಲಿ ಲಕ್ಷ್ಯ ಕಾರ್ಯಕ್ರಮದ ಗುಣಮಟ್ಟದ ಆರೋಗ್ಯ ಸೇವಾ ಅನುಷ್ಠಾನಕ್ಕಾಗಿ ಕೇಂದ್ರ ಸರಕಾರದಿಂದ ಕೊಡ ಮಾಡಲ್ಪಡುವ ಪ್ರಮಾಣ ಪತ್ರದ  ಜೊತೆ ಪ್ಲಾಟಿನಂ ಬ್ಯಾಜ್ ಪಡೆದಿದೆ ಎಂದರು. 

ಸೇವಾ ಗುಣ ಮಟ್ಟವನ್ನು ಇನ್ನಷ್ಟು ವಿಸ್ತರಿಸಿ, ತಾಯಿ ಮತ್ತು ಶಿಶು ಮರಣವನ್ನು ಕನಿಷ್ಠತಮಕ್ಕೆ ಇಳಿಸುವ ನಿಟ್ಟಿನಲ್ಲಿ ಸರ್ವಸಿಬ್ಬಂದಿಗಳು ಶ್ರಮಿಸಬೇಕೆಂದು ಕರೆಯಿತ್ತರು.

ಲಕ್ಷ್ಯ ಗುಣಮಟ್ಟದ ಸೇವೆಯಲ್ಲಿ ವಿವಿಧ ರೀತಿಯಲ್ಲಿ ಪೂರಕ ಸಹಾಯ ಹಸ್ತವನ್ನು ನೀಡಿದ ಚೈತನ್ಯಗಳನ್ನು ಅಭಿನಂದಿಸಿ ಗೌರವಿಸಲಾಯಿತು. ಲಕ್ಷ್ಯ ಮೆಂಟರ್ ಆಗಿ ಸೇವೆ ಸಲ್ಲಿಸಿದ ಕರ್ನಾಟಕ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ರಾಘವೇಂದ್ರ ರಾವ್  ಮತ್ತು ವೆನ್ಲಾಕ್ ಜಿಲ್ಲಾಸ್ಪತ್ರೆಯ ಡಾ.ಶರತ್ ಕುಮಾರ್, ಕ್ವಾಲಿಟಿ ಕನ್ಸಲ್ಟೆಂಟ್ ಡಾ.ರಾಜೇಶ್ವರಿ, ಕ್ವಾಲಿಟಿ ಮ್ಯಾನೇಜರ್ ಶಾಂತಿಪ್ರಿಯಾ, ಶುಶ್ರೂಷಾಧಿಕಾರಿಗಳಾದ ಅಂಬಿಕಾ, ಡಯಾನಾ ಅವರ ನೇತೃತ್ವದ ಹೆರಿಗೆ ಮತ್ತು ಶಸ್ತ್ರ ಚಿಕಿತ್ಸಾ ಸರ್ಕಲ್, ಹಿರಿಯ ತಜ್ಞರುಗಳಾದ ಡಾ.ಅರವಿಂದ್, ಡಾ.ಸುಂದರಿ,ಡಾ.ಲೇಖಾ ಮತ್ತು ಸಹಕರಿಸಿದ ಹೇಮಂತ್ ಪ್ರಜ್ಞಾ, ಜಿತೇಶ್  ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಶುಶ್ರೂಷಾಧೀಕ್ಷಕಿ 
ತ್ರೇಸಿಯಮ್ಮ, ನರ್ಸಿಂಗ್ ಸುಪರ್ ವೈಸರ್  ಅನಸೂಯ ಉಪಸ್ಥಿತರಿದ್ದರು. ಪ್ರವೀಣ್ ಸ್ವಾಗತಿಸಿ, ಸುಮಂಗಲಾ ಪ್ರಸ್ತಾಪಿಸಿದರು.
ಲವಿನಾ, ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು