9:30 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Mangaluru | ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಲಾಯರ್ ಕೆ.ಎಸ್.ಎನ್.ರಾಜೇಶ್ ಮೇಲೆ ಎಫ್ಐಆರ್ ದಾಖಲು ; ಅತ್ಯಾಚಾರ ಯತ್ನ ಆರೋಪ

19/10/2021, 10:15

ಮಂಗಳೂರು(reporterkarnataka.com) ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ.

ಕಾನೂನು ವಿದ್ಯಾರ್ಥಿನಿಯೋರ್ವಳು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.

ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಆರೋಪಿ ವಿರುದ್ಧ ಸೆಕ್ಷನ್ 376,376-2,376(2)-ಕೆ,376 ಸಿ, 511, 354(), 354(2), 354 (2), 354 (8), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು