4:24 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mangaluru | ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಲಾಯರ್ ಕೆ.ಎಸ್.ಎನ್.ರಾಜೇಶ್ ಮೇಲೆ ಎಫ್ಐಆರ್ ದಾಖಲು ; ಅತ್ಯಾಚಾರ ಯತ್ನ ಆರೋಪ

19/10/2021, 10:15

ಮಂಗಳೂರು(reporterkarnataka.com) ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ.

ಕಾನೂನು ವಿದ್ಯಾರ್ಥಿನಿಯೋರ್ವಳು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.

ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಆರೋಪಿ ವಿರುದ್ಧ ಸೆಕ್ಷನ್ 376,376-2,376(2)-ಕೆ,376 ಸಿ, 511, 354(), 354(2), 354 (2), 354 (8), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು