3:10 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಮನೆ, ಕಚೇರಿ ಸೇರಿದಂತೆ ರಾಜ್ಯದ 55 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

19/07/2024, 11:52

ಬೆಂಗಳೂರು(reporterkarnataka.com):
ರಾಜ್ಯ ಲೋಕಾಯುಕ್ತರು ಶುಕ್ರವಾರ ಮುಂಜಾನೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರ ನಿವಾಸ, ಕಚೇರಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳ 55 ಕಡೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಒಂದು ವಾರದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ 2ನೇ ದೊಡ್ಡ ದಾಳಿ ಇದಾಗಿದೆ. ಒಂಬುಡ್ಸ್‌ಮನ್‌ನ ಪೊಲೀಸ್ ವಿಭಾಗದ ಸುಮಾರು 85 ಅಧಿಕಾರಿಗಳು, 12 ಸರಕಾರಿ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.
ದಾಳಿ ನಡೆದ ಅಧಿಕಾರಿಗಳಲ್ಲಿ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ರಮೇಶ್ ಕುಮಾರ್ ಮತ್ತು ಬೆಂಗಳೂರು ವಿಭಾಗದ ಕಾನೂನು ಮಾಪನಶಾಸ್ತ್ರದ ಉಪ ನಿಯಂತ್ರಕ ಅಥರ್ ಅಲಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ
ಸಿ ಎಲ್ ಆನಂದ್ ಸೇರಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮೂಲತಃ ಮಂಡ್ಯದವರಾಗಿರುವ ಆನಂದ್ ಇಂಡಿಯಾ ಆರ್ಮಿಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ರಾಜ್ಯ ಸರಕಾರ ಆನಂದ ಅವರನ್ನು ಇತ್ತೀಚೆಗೆ ವರ್ಗಾವಣೆಗೊಳಿಸಿ ಬಳಿಕ ಆದೇಶ ತಡೆಹಿಡಿದಿತ್ತು.
ಜುಲೈ 11ರಂದು ಲೋಕಾಯುಕ್ತರು 9 ಜಿಲ್ಲೆಗಳಲ್ಲಿ 11 ಅಧಿಕಾರಿಗಳ ಮೇಲೆ ದಾಳಿ ನಡೆಸಿ 45.1 ಕೋಟಿ ರೂಪಾಯಿ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು