7:56 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Mangaluru | ಮಂಗಳೂರು ಕುಡಿಯುವ ನೀರಿನ ಸಮಸ್ಯೆ: ಪಾಲಿಕೆ ಆಯುಕ್ತರ ಜತೆ ಶಾಸಕ ವೇದವ್ಯಾಸ ಕಾಮತ್ ತುರ್ತುಸಭೆ

06/06/2025, 18:01

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ತುರ್ತು ಸಭೆ ನಡೆಸಿದರು.


ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ವಿಪರೀತ ಮಳೆ ಸುರಿದಿದ್ದರೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಲ್ಲ. ಇನ್ನೊಂದೆಡೆ ರಾಜಕಾಲುವೆಗಳಲ್ಲಿ ಸಮರ್ಪಕವಾಗಿ ಹೂಳೆತ್ತದಿರುವಿಕೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಸಾಲದ್ದಕ್ಕೆ ಮಳೆಯಿಂದ ತೊಂದರೆಗೀಡಾದವರಿಗೆ ಪಾಲಿಕೆ ವತಿಯಿಂದ ಯಾವುದೇ ನೆರವು ಸಿಗುತ್ತಿಲ್ಲ. ಕಸ ವಿಲೇವಾರಿಯ ಅವ್ಯವಸ್ಥೆಯ ಬಗ್ಗೆಯೂ ಜನರಿಂದ ದೂರುಗಳು ಬರುತ್ತಿವೆ. ಬಲ್ಲಾಳ್ ಬಾಗ್ ಬಳಿಯ ಶಿಥಿಲಗೊಂಡಿರುವ ರಾಜಕಾಲುವೆಯ ಬ್ರಿಡ್ಜ್ ನಿಂದ ನೀರು ಸಾರಾಗವಾಗಿ ಹರಿಯದೇ ಅದರಿಂದಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು ಆ ಬಗ್ಗೆಯೂ ಕ್ರಮಕೈಗೊಳ್ಳುವುದು ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಪಾಲಿಕೆ ಅಧಿಕಾರಿಗಳು ಯಾವುದನ್ನೂ ಹಗುರವಾಗಿ ಪರಿಗಣಿಸದೇ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು