7:52 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ

18/04/2025, 23:03

ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು.


ಪ್ರತಿಭಟನಾ ಸಮಾವೇಶಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಕೊಂಡು ಆಗಮಿಸಿದರು. ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಮತ್ತು ಮಂಗಳೂರು ಕಡೆಯಿಂದ ವಾಹನಗಳಲ್ಲಿ ಬಂದ ಪ್ರತಿಭಟನಾಕಾರರು ಒಂದು ಕಿಲೊಮೀಟರಿಗಿಂತಲೂ ದೂರ ವಾಹನಗಳನ್ನು ನಿಲ್ಲಿಸಿ ನಡೆದುಕೊಂಡು ಬಂದರು.‌
ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿಸುತ್ತಿತ್ತು. ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾಯಿತು.
ರಾಷ್ಟ್ರಧ್ವಜ ಹಿಡಿದುಕೊಂಡು ಬಂದ ಪ್ರತಿಭಟನಾಕಾರರು ಮೈದಾನದ ಒಳಗೆ ಬಂದಾಗ ರಾಷ್ಟ್ರಧ್ವಜಗಳೇ ರಾರಾಜಿಸಿದವು. ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಮಾಡದಂತೆ, ಉದ್ರೇಕಕಾರಿ ಘೋಷಣೆ ಕೂಗದಂತೆ, ಆಕ್ರೋಶಕ್ಕೆ ಒಳಗಾಗದಂತೆ ಸಂಘಟಕರು ಪದೇ ಪದೇ ಮನವಿ‌ ಮಾಡಿದರು.
ಶಾಂತಿಯುತ ಹೋರಾಟ ಮಾಡಬೇಕು, ಆವೇಶ, ಆಕ್ರೋಶವನ್ನು ಬದಿಗೊತ್ತಿ ‘ನಮ್ಮ ಸಂಸ್ಕೃತಿಯ ಪ್ರಕಾರ ವರ್ತಿಸಬೇಕು’ ಎಂದು ಮನವಿ‌ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು